Mon,May06,2024
ಕನ್ನಡ / English

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ಒಂದು ದಂತಕಥೆ: ಡಾ ಶಿವರಾಜ್‌ಕುಮಾರ್ | JANATA NEWS

17 Mar 2023
1899

ಬೆಂಗಳೂರು : ಇಂದು ದಿ.ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಅವರ ಸಹೋದರ ಶಿವರಾಜ್​​ ಕುಮಾರ್​ ಸೇರಿದಂತೆ ಸ್ಯಾಂಡಲ್​ವುಡ್‌​​ ಸೆಲೆಬ್ರಿಟಿಗಳು ಹಾಗೂ ರಾಜಕೀಯ ನಾಯಕರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಪ್ಪು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುವ ಮೂಲಕ ತಮ್ಮನೊಂದಿಗಿರುವ ಬಾಲ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್ ತಮ್ಮ ಫೇಸ್​ಬುಕ್​ನಲ್ಲಿ ಅಪ್ಪು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. 'ನಿನ್ನ ನೆನಪುಗಳು ಎಂದಿಗೂ ಅಮರ..ಹುಟ್ಟುಹಬ್ಬದ ಶುಭಾಶಯಗಳು ಅಪ್ಪು' ಎಂದು ಬರೆಯುವ ಮೂಲಕ ಫೋಟೋ ಹಂಚಿಕೊಂಡಿದ್ದಾರೆ.

ಅಪ್ಪು
ನೀನು ಹುಟ್ಟಿದಾಗ ನಮ್ಮ ಮನೆಯಲ್ಲಿ ಉಲ್ಲಾಸ ಉಕ್ಕಿ ಹರಿಯುತ್ತಿತ್ತು. ನಿನ್ನ ಕಣ್ಣಲ್ಲಿದ್ದ ಹೊಳಪು ನೀನು ಪವರ್ ಸ್ಟಾರ್ ಆಗೋದನ್ನ ಆವಾಗ್ಲೇ ಹೇಳ್ತಾ ಇತ್ತು. ನೀನು ನಕ್ಕರೆ ಎಲ್ರು ನಗ್ತಾ ಇದ್ರು. ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ತಾ ಇದ್ರು, ನೀನು ಕುಣಿದರೆ ಎಲ್ಲರೂ ರೋಮಾಂಚನದಿಂದ ನೋಡ್ರಾ ಇದ್ರು, ಮನೆಗೆ ಬಂದ ಅತಿಥಿ ನೆಂಟರುಗಳಿಗೆಲ್ಲ ನೀನೇ ಬೇಕು. ಅಂತಹ ಪುಟ್ಟ ಅಪ್ಪು ಮಿಂಚಿನಂತೆ ತೆರೆಯ ಮೇಲೆ ಬಂದು ಹೆಮ್ಮರವಾಗಿ, ಕೋಟ್ಯಾಂತರ ಜನರಿಗೆ ನೆರಳಾಗಿದ್ದನ್ನು ಹತ್ತಿರದಿಂದ ನೋಡಿದ ನಾನೇ ಪುನೀತ.

ನಿನ್ನನು ಎತ್ತಿ ಆಡಿಸಿದ ಅಣ್ಣನಾಗಿ, ನಿನ್ನ ಜೊತೆ ಕೂಡಿ ಆಡಿದ ಸ್ನೇಹಿತನಾಗಿ, ನಿನ್ನ ಕೆಲಸಗಳನ್ನು ಮೆಚ್ಚಿ ಅಪ್ಪಿಕೊಂಡ ಕನ್ನಡಿಗನಾಗಿ, ಹಬ್ಬ ಯಾವುದೇ ಆಗಿದ್ರೂ ನಿನ್ನ ಹೆಸರಿನಲ್ಲಿ ಪಟಾಕಿಗಳನ್ನು ಹಚ್ಚೋ ಅಭಿಮಾನಿಗಳಲ್ಲಿ ಒಬ್ಬನಾಗಿ ಹೇಳ್ತಾ ಇದೀನಿ, ನೀನು ಹುಟ್ಟಿದ್ದೇ ಒಂದು ಉತ್ಸವ. ನೀನು ಬೆಳೆದಿದ್ದು ಇತಿಹಾಸ, ನಿನ್ನ ಜೀವನ ಒಂದು ದಂತಕಥೆ. ನಿನ್ನ ನೆನಪುಗಳು ಎಂದಿಗೂ ಅಮರ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು.

janata



ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧ ಸಾಧನೆಗೈದು ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ ಅವರ ಜನ್ಮಸ್ಮರಣೆಯಂದು ಗೌರವ ಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

"ತಮ್ಮ ವ್ಯಕ್ತಿತ್ವ ಹಾಗೂ ಕಲಾಪ್ರೌಢಿಮೆಯಿಂದ ಅಸಂಖ್ಯಾತ ಅಭಿಮಾನಿಗಳನ್ನು ಪಡೆದ ಪ್ರತಿಭಾನ್ವಿತ ಕಲಾವಿದ, ಕನ್ನಡಿಗರ ಕಣ್ಮಣಿ, ವರನಟ ಡಾ.ರಾಜ್ ಕುಮಾರ್ ಪುತ್ರ, ಅಕಾಲಿಕವಾಗಿ ನಮ್ಮನ್ನಗಲಿದ ಕರ್ನಾಟಕ ರತ್ನ ಡಾ.ಪುನೀತ್ ರಾಜ್​ಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ನಮನಗಳು" ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್‌ಕುಮಾರ್ ಸಮಾಧಿ ಬಳಿ ಸಹಸ್ರಾರು ಅಭಿಮಾನಿಗಳು ಬಂದು ಅಪ್ಪು ದರ್ಶನವನ್ನು ಪಡೆಯುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಅಕ್ಷರಶಃ ಜನಜಾತ್ರೆಯಾಗಿದೆ, ಅಲ್ಲಿಗೆ ಬರುವ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಇಂದು 1 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

RELATED TOPICS:
English summary :Puneeth Born is a festival, grew up is history, life is a legend: Dr Shivarajkumar

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...