ಕುಡಿದ ಅಮಲಿನಲ್ಲಿ ಚಾಕುವಿನಿಂದ ಇರಿದು ರೌಡಿಶೀಟರ್ ಕೊಲೆ | JANATA NEWS
ಮೈಸೂರು : ಕುಡಿದ ಅಮಲಿನಲ್ಲಿ ಚಾಕುವಿನಿಂದ ಇರಿದು ರೌಡಿಯನ್ನ ಕೊಲೆ ಮಾಡಿರುವ ಘಟನೆ ನಗರದ ಚಾಮರಾಜ ಜೋಡಿ ರಸ್ತೆಯಲ್ಲಿ ನಡೆದಿದೆ.
ಮೈಸೂರಿನ ಕಾಕರವಾಡಿಯ ನಿವಾಸಿ ಶ್ರೀಗಂಧ ಕೊಲೆಯಾದ ರೌಡಿಶೀಟರ್. ಶ್ರೀಗಂಧನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿ ರವಿ.
ಇಬ್ಬರು ರೌಡಿ ಶೀಟರ್ಗಳು ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದಾರೆ. ಈ ಗಲಾಟೆ ವೇಳೆ ಮೈಸೂರು ಕಾಕರವಾಡಿ ಬಡಾವಣೆಯ ನಿವಾಸಿ ಶ್ರೀಗಂಧ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಕೆ.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Drunken stabbing and rowdy sheeter murder