ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ | JANATA NEWS
ಹಾಸನ : ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಜಿನೈಕ್ಯರಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.
ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಬೆಳಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಶ್ರೀಗಳು ಮೃತಪಟ್ಟಿದ್ದಾರೆ.
ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಸಂಜೆ ಆರು ಗಂಟೆಯೊಳಗಾಗಿ ಶ್ರೀಗಳ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿಸಿದ್ದಾರೆ.