ಬಿಎಂಟಿಸಿ ಬಸ್ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ | JANATA NEWS
ಬೆಂಗಳೂರು : ಬಿಎಂಟಿಸಿ ಬಸ್ಗೆ ಬೆಂಕಿ ತಗುಲಿ ನಿರ್ವಾಹಕ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಬಿಎಂಟಿಸಿ ಕಂಡಕ್ಟರ್ ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮಾರ್ಚ್ 9 ರಂದು ಬ್ಯಾಡರಹಳ್ಳಿ ನಿಲ್ದಾಣದಲ್ಲಿ ಸುಮ್ಮನಹಳ್ಳಿ ಡಿಪೋ 31ಕ್ಕೆ ಸೇರಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಕಂಡಕ್ಟರ್ ಮುತ್ತಯ್ಯ ಸಜೀವ ದಹನವಾಗಿದ್ದರು.
ಮೃತ ಕಂಡಕ್ಟರ್ ಮುತ್ತಯ್ಯ ಅವರ ಮೊಬೈಲ್ ಹಾಗೂ ಯುಪಿಐ ಐಡಿ ಪರಿಶೀಲನೆ ನಡೆಸಿದಾಗ ಅಗ್ನಿ ದುರಂತ ಸಂಭವಿಸಿದ ಸ್ಥಳದಿಂದ ಕೊಂಚ ದೂರ ಇರುವ ಪೆಟ್ರೋಲ್ ಬಂಕ್ ಖಾತೆಗೆ 700 ರೂಪಾಯಿ ಹಣ ವರ್ಗಾವಣೆಯಾಗಿದ್ದು, ಪೆಟ್ರೋಲ್, ಡಿಸೇಲ್ ಖರೀದಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
ಹಣಕಾಸಿನ ತೊಂದರೆಗೆ ಸಿಲುಕಿದ್ದ ಮುತ್ತಯ್ಯ ಮುಂಜಾನೆ ವೇಳೆಗೆ ಬಸ್ನ ಎಲ್ಲ ಕಿಟಕಿಗಳು ಹಾಗೂ ಡೋರ್ ಅನ್ನು ಒಳಗಿನಿಂದ ಮುಚ್ಚಿ ಪೆಟ್ರೋಲ್, ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡಿರಬಹುದು ಎನ್ನಲಾಗಿದೆ.