ಪ್ರವಾಹದಲ್ಲಿ ಬರಲಿಲ್ಲ, ಕೋವಿಡ್ ನಲ್ಲೂ ಇಲ್ಲ, ಈಗ ಮೋದಿಗೆ ಕರ್ನಾಟಕದ ಮೇಲೆ ಪ್ರೀತಿ ಉಕ್ಕಿದೆ | JANATA NEWS
ರಾಮನಗರ : ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡದೇ ತಂತ್ರಗಾರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನನ್ನ ಯಾರಿಂದಲೂ ಕಟ್ಟಾಕೊಕೆ ಸಾಧ್ಯನೇ ಇಲ್ಲ. ಜನ ಫ್ರೀ ಬಿಡುತ್ತಾರೆ ಎಂದು ಹೇಳಿದರು.
ಚನ್ನಪಟ್ಟಣದ ಕಾರ್ಯಕರ್ತರು ನನಗೆ ರಾಜ್ಯ ಕಟ್ಟುವ ಕೆಲಸ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಜನರು ನನ್ನ ಮನೆ ಮಗನಂತೆ ನೋಡುತ್ತಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರು ಜನ ಕಿವಿಕೊಡಲ್ಲ. ಜನರೇ ನನಗೆ ರಕ್ಷಣೆ ನೀಡುತ್ತಾರೆ. ಎಲ್ಲವನ್ನೂ ಜನರಿಗೆ ಬಿಟ್ಟು ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್ನಿಂದ ಯಾರೇ ನಿಂತರೂ ತಲೆಕೆಡಿಸಿಕೊಳ್ಳಲ್ಲ ಎಂದರು.