ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ | JANATA NEWS
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಯಾವ ಮಟ್ಟದಲ್ಲಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಹೈ ಕಮಾಂಡ್ ಹೇಳುವುದನ್ನು ಇವರು ಒಪ್ಪಲ್ಲ ಅನ್ನುವುದಕ್ಕೆ ಇದು ನಿದರ್ಶನ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರ ಮಧ್ಯೆ ಸಮನ್ವಯತೆ ಇಲ್ಲ, ಹಾಗಾಗಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ ಎಂದು ಲೇವಡಿ ಮಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದ್ದೇ ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದರು. ಜೆಡಿಎಸ್ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳ ಆಡಳಿತವನ್ನು ಕಂಡು ರೋಸಿಹೋಗಿರುವ ರಾಜ್ಯದ ಜನತೆ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಳೇ ಮೈಸೂರು ಭಾಗದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಒಟ್ಟು 15 ವಿಧಾನ ಸಭಾ ಕ್ಷೇತ್ರಗಳನ್ನು ತಾವು ಜವಾಬ್ದಾರಿ ವಹಿಸಿದ್ದು, ಸಚಿವರಾದ ಮುನಿರತ್ನ, ಎಂಟಿಬಿ ನಾಗರಾಜ್, ಮತ್ತು ಈ ಭಾಗದ ಸಂಸದರೊಂದಿಗೆ ಸೇರಿ ಶ್ರಮಿಸುತ್ತಿದ್ದೇವೆ. ಈಕ್ಷೇತ್ರಗಳಲ್ಲಿ ಈವರೆಗೂ ಶೂನ್ಯ ಸಾಧನೆಯಲ್ಲಿ ಬಿಜೆಪಿ ಇದ್ದು, ಈ ಬಾರಿ ಕನಿಷ್ಠ 5 ರಿಂದ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ವಿವಾದಾತ್ಮ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಖಾಲಿಯೂ ಆಗುವುದಿಲ್ಲ, ಖಾಲಿಯಾಗದ ಖುರ್ಚಿಗೆ ಟವೆಲ್ ಹಾಕಿಕೊಂಡು ಕೊತರೆ ಉಪಯೋಗವಿಲ್ಲ, ಅವರ ಆಸೆ ಈಡೇರುವುದೂ ಇಲ್ಲ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಯಾವ ಮಟ್ಟದಲ್ಲಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಹೈಕಮಾಂಡ್ ಹೇಳುವುದನ್ನು ಇವರು ಒಪ್ಪಲ್ಲ ಅನ್ನುವುದಕ್ಕೆ ಇದು ನಿದರ್ಶನ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಬ್ಬರ ಮಧ್ಯೆ ಸಮನ್ವಯತೆ ಇಲ್ಲ, ಹಾಗಾಗಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಬಹುಮತ ಪಡೆಯುವುದಿಲ್ಲ ಎಂದು ಹೇಳಿದರು.