ಮೋದಿಯಂತಹ ಸ್ಟಾರ್ ನಟರೇ ಏನು ಮಾಡೋಕ್ ಆಗ್ತಿಲ್ಲ, ಇನ್ನು ಇವರೇನು ಮಾಡ್ತಾರೆ | JANATA NEWS
ಮೈಸೂರು : ಬಿಜೆಪಿ ಚುನಾವಣ ಪ್ರಚಾರಕ್ಕೆ ಖ್ಯಾತ ನಟರಾದ ಸುದೀಪ್ ಹಾಗೂ ಪವನ್ ಕಲ್ಯಾಣ್ ಕರೆತರುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದು, ”ಮೋದಿಯಂತ ಸ್ಟಾರ್ ನಟರ ಕೈಯಲ್ಲೇ ಅಟ್ರಾಕ್ಷನ್ ಮಾಡೋಕೆ ಆಗ್ತಿಲ್ಲ.ಅಂತಹದರಲ್ಲಿ ಈ ಸ್ಟಾರ್ ನಟರು ಏನು ಮಾಡುತ್ತಾರೆ ನೋಡೊಣ” ಎಂದಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಮಾತನಾಡಿ ಅವರು, ವರುಣಾದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮೈತ್ರಿ ಆಗಿದೆ, ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ. ಬಿಜೆಪಿ ಅಲ್ಲಿ ಸಮರ್ಥ ಅಭ್ಯರ್ಥಿ ಹಾಕುತ್ತಿಲ್ಲ ಎಂದು ಹೇಳಿದರು.
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಹಾಸನ ಟಿಕೆಟ್ ಪಕ್ಷದ ಕಾರ್ಯಕರ್ತನಿಗೆ ಕೊಡೋದು ಎಂದು ಹೇಳಿದ್ದೇನೆ.ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ.ಕಾರ್ಯಕರ್ತರಿಗೆ ಕೊಡುವ ನಿರ್ಣಯ ಆಗುತ್ತದೆ.”ಎಂದರು.
”ಅನಿತಾ ಕುಮಾರಸ್ವಾಮಿ ಸ್ಪರ್ಧೆ ಪ್ರಶ್ನೆಯೇ ಇಲ್ಲ.ಎರಡು ಬಾರಿ ಪಕ್ಷದಲ್ಲಿ ಅಭ್ಯರ್ಥಿ ಇಲ್ಲದಕ್ಕೆ ಅನಿವಾರ್ಯ ಸ್ಪರ್ಧೆ ಮಾಡಿದ್ದರು.ಪಕ್ಷ ಸಂಘಟನೆಗೆ ಬೇಕಾದರೆ ಹೋಗಿ ಬರುತ್ತಾರೆ.ಮುಂದೆ ಯಾವುದೇ ಕಾರಣಕ್ಕೂ ಅವರು ಅಭ್ಯರ್ಥಿಯಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.