ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಮಾವುತರಾದ ಬೊಮ್ಮನ್-ಬೆಳ್ಳಿ ದಂಪತಿಯ ಜೊತೆ ಮೋದಿ ಮಾತುಕತೆ! | JANATA NEWS
ಬೆಂಗಳೂರು : ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಮಾವುತರಾದ ಬೊಮ್ಮನ್-ಬೆಳ್ಳಿ ದಂಪತಿಯನ್ನು ಪ್ರಧಾನಿ ಮೋದಿ ಈಗ ಭೇಟಿಯಾಗಿದ್ದಾರೆ. ಬಂಡೀಪುರದಲ್ಲಿ ಸಫಾರಿ ಮುಗಿಸಿದ ಪಿಎಂ ತಮಿಳುನಾಡಿನ ಮಧುಮಲೈನ ತೆಪ್ಪಕಾಡು ಆನೆ ಕ್ಯಾಂಪ್ ಗೆ ಭೇಟಿ ನೀಡಿದ್ದಾರೆ.
ಈ ವೇಳೆ 'ದಿ ಎಲಿಫೆಂಟ್ ವಿಸ್ಪರರ್ಸ್' ಖ್ಯಾತಿಯ ಮಾವುತರಾದ ಬೊಮ್ಮನ್-ಬೆಳ್ಳಿ ದಂಪತಿಯ ಜೊತೆ ಸೇರಿ ಅವರು ಆನೆಗಳಿಗೆ ಆಹಾರ ತಿನಿಸಿದ್ದಾರೆ. ಅನಾಥವಾಗಿ ಸಿಕ್ಕ ಆನೆ ಮರಿಗಳನ್ನು ಬೊಮ್ಮನ್ ಮತ್ತು ಬೆಳ್ಳಿ ಸಾಕುತ್ತಾರೆ. ಅವರ ಜೀವನದ ಕಥೆಯನ್ನು ಸಾರುವ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರಕ್ಕೆ ಈ ವರ್ಷ ಆಸ್ಕರ್ ಪ್ರಶಸ್ತಿ ಸಿಕ್ಕಿತು.
ಪ್ರಧಾನಿ ಮೋದಿ ಬಂಡೀಪುರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಆಸ್ಕರ್ ವಿಜೇತ ಸಾಕ್ಷ್ಯಚಿತ್ರ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಯನ್ನು ಮಾತನಾಡಿಸಿದ್ದಾರೆ.