ಪ್ರಧಾನಿ ಮೋದಿ ಸಫಾರಿ ಹಾಕೊಂಡು ಸಫಾರಿ ಮಾಡಲು ಬಂದಿದ್ದಾರೆ, ಇದಕ್ಕೆ ಜನ ವೋಟ್ ಹಾಕ್ತಾರಾ? | JANATA NEWS
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಹಾಕೊಂಡು, ಸಫಾರಿ ಮಾಡಲು ಬಂದಿದ್ದಾರೆ. ವನ್ಯಜೀವಿ ನೋಡಲು ಬಂದ ತಕ್ಷಣ ಜನ ಇವರಿಗೆ ವೋಟು ಒತ್ತಿ ಬಿಡುತ್ತಾರಾ? ಪ್ರವಾಹ ಬಂದಾಗ, ಕೋವಿಡ್ ಅನಾಹುತದಿಂದ ಜನ ಬೀದಿಗೆ ಬಂದಾಗ ಬರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ, ಪ್ರವಾಹದಿಂದ ಜನ ಬೀದಿಗೆ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಹೊತ್ತಿನಲ್ಲಿ ಸಫಾರಿಗೆ ಬಂದಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕು. ಆದರೆ ವನ್ಯ ಜೀವಿಗಳಿಂದ ಎಷ್ಟು ದಾಳಿ ಆಗಿದೆ ಎಂಬ ಮಾಹಿತಿ ಮೋದಿಯವರಿಗೆ ಇದೆಯೇ? ದಾಳಿಗೊಳಗಾದ ಒಂದು ಕುಟುಂಬಕ್ಕಾದರೂ ಮೋದಿ ಭೇಟಿ ಕೊಟ್ಟಿದ್ದಾರಾ ಎಂದು ಕಿಡಿಕಾರಿದ್ದಾರೆ.
ಕೂಲಿಂಗ್ ಗ್ಲಾಸ್, ಸೂಟು ಬೂಟು ಹಾಕೊಂಡು ಬಂದ್ರೆ ಏನು ಪ್ರಯೋಜನ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ, ಆದರೆ ಮಾನವರ ರಕ್ಷಣೆಯನ್ನೂ ಮಾಡಬೇಕಲ್ವ? ವನ್ಯಜೀವಿಗಳಿಂದ ಎಷ್ಟು ದಾಳಿಯಾಗಿದೆ, ಎಷ್ಟು ಜೀವ ಹಾನಿಯಾಗಿದೆ. ಯಾವುದಾದರೂ ಒಂದು ಕುಟುಂಬಕ್ಕೆ ಭೇಟಿ ಕೊಟ್ಟಿದ್ದಾರಾ? ವನ್ಯಜೀವಿ ದಾಳಿಗೆ ಒಳಗಾದ ಕುಟುಂಬ ಪರಿಸ್ಥಿತಿ ಏನಾಗಿದೆ ಎಂದು ನೋಡಿದ್ದಾರಾ?
ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ. ಆದರೆ ಮಾನವರ ರಕ್ಷಣೆಯನ್ನು ಮಾಡಬೇಕಲ್ವಾ. ವನ್ಯಜೀವಿಗಳಿಂದ ಎಷ್ಟು ದಾಳಿ ಆಗಿದೆ. ಎಷ್ಟು ಜೀವ ಹಾನಿ ಆಗಿದೆ. ಯಾವುದಾದರೂ ಒಂದು ಕುಟುಂಬದ ಭೇಟಿ ಮಾಡುತ್ತಿದ್ದಾರಾ? ವನ್ಯಜೀವಿಗಳ ದಾಳಿಗೆ ಒಳಗಾದ ಕುಟುಂಬದ ಪರಿಸ್ಥಿತಿ ಏನಾಗಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಅರಣ್ಯ ಭಾಗದಲ್ಲಿ ಪೌಷ್ಟಿಕಾಂಶ, ಆಹಾರದ ಕೊರತೆ ಇದೆ ಅಂತಾ ವರದಿ ನೀಡಿದ್ದಾರೆ. ಅದರ ಬಗ್ಗೆ ಇವರಿಗೆ ಗಮನ ಹರಿಸಲು ಆಗಲ್ಲ. ನಾಡಿನ ಜನತೆ ಇದನ್ನ ಅರ್ಥ ಮಾಡಿಕೊಳ್ಳಬೇಕು. ವನ್ಯಜೀವಿ ನೋಡಲು ಬಂದ ತಕ್ಷಣ ರಾಜ್ಯದ ಜನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಒತ್ತು ಬಿಡ್ತಾರಾ ಎಂದು ಕುಮಾರಸ್ವಾಮಿ ಹೇಳಿದ್ದಾರೆ.