ಕಾಂಗ್ರೆಸ್ ನಲ್ಲಿ 92 ವರ್ಷದವರಿಗೆ ಟಿಕೆಟ್ ನೀಡಿದೆ, ಅವರಿಗೂ ನಮ್ಮಗೂ ವ್ಯತಾಸ ಇದೆ! | JANATA NEWS
ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಹಲವಾರು ಸುತ್ತಿನ ಮಾತುಕತೆಯಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ ವಿಧಾನಸಭೆ ಚುನಾವಣೆ ಕುರಿತಂತೆ ಹಲವು ಸತ್ತಿನ ಮಾತುಕತೆ ನಂತರ ಅಂತಿಮವಾಗಿ ಎಲ್ಲವೂ ನಿರ್ಣಯ ಆಗಿದೆ. ನಮ್ಮ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಸಂಜೆ ದೆಹಲಿಗೆ ಬಂದ ನಂತರ ಅವರೊಂದಿಗೆ ಮಾತುಕತೆ ನಡೆಸಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಮೊದಲ ಹಂತದಲ್ಲಿ ದೊಡ್ಡ ಪಟ್ಟಿಯನ್ನು ಹಾಗೂ ಎರಡನೇ ಹಂತದಲ್ಲಿ ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ನಾನು ಚುನಾಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನಮ್ಮ ರಾಷ್ಟ್ರೀಯ ಜಾಯಕರಿಗೆ ಪತ್ರ ಬರೆದಿದ್ದಾರೆ. ಈ ಮಾತನ್ನು ಅವರು ಖಾಸಗಿಯಾಗಿ ನಮಗೆ ಹೇಳುತ್ತಿದ್ದರು. ಆದರೆ, ನಾವು ನಿಮ್ಮ ಅನುಭವ ಮತ್ತು ಸೇವೆ ಪಕ್ಷಕ್ಕೆ ಬೇಕಾಗಿದ್ದು ನೀವು ಜೊತೆಗಿರಬೇಕು ಎಂದು ಹೇಳಿದ್ದೆವು. ಈಗ ದೀರ್ಘ ಚಿಂತನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನಮಗೆ ಒಂದು ಹಂತದ ಸೀನಿಯಾರಿಟಿ ಬಂದ ನಂತರ ನಾವು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ನಿಯಮವನ್ನು ಬಿಜೆಪಿ ಹುಟ್ಟುಹಾಕಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಅನ್ವಯ ಮಾಡಲಾಗಿದ್ದು, ಈಗ ರಾಜ್ಯದಲ್ಲೂ ಅನ್ವಯ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ನಲ್ಲಿ 92 ವರ್ಷದವರಿಗೆ ಟಿಕೆಟ್ ನೀಡಿದೆ. ಅವರಿಗೂ ನಮ್ಮಗೂ ವ್ಯತಾಸ ಇದೆ. ನಮ್ಮ ನೇತೃತ್ವ ಮತ್ತು ಆದರ್ಶ ವಿಭಿನ್ನವಾಗಿವೆ. ಅದಕ್ಕಾಗಿ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತದೆ.
ದಾವಣಗೆರೆಯಲ್ಲಿ 92 ವರ್ಷದ ಹಿರಿಯ ವ್ಯಕ್ತಿ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬೇರೆ ಪಕ್ಷಕ್ಕೂ ನಮಗೂ ಇರುವ ವ್ಯತ್ಯಾಸ ಇದಾಗಿದೆ. ಹೊಸ ನಿಯಮವನ್ನು ನಾವು ಜಾರಿಗೆ ತರಲಾಗುತ್ತಿದ್ದು, ಇದಕ್ಕೆ ಸ್ವತಃ ಈಶ್ವರಪ್ಪ ಅವರು ಚುನಾವಣಾ ರಾಜಕೀಯ ನೀಡಿದ್ದಾರೆ. ಅವರು ಈಗ ಬಿಜೆಪಿಗೆ ಮಾದರಿ ಆಗಿದ್ದಾರೆ. ಇದೇ ಬಿಜೆಪಿಗೂ ಮತ್ತು ಕಾಂಗ್ರೆಸ್ಗೆ ಇರುವ ವ್ಯತ್ಯಾಸವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.