ಕಾಂಗ್ರೆಸ್ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ! | JANATA NEWS
ಬೆಂಗಳೂರು : ಕಾಂಗ್ರೆಸ್ನಲ್ಲಿ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಸ್ಕೃತಿ ಇಲ್ಲ ಎಂದು ಸಚಿವ ವಿ. ಸೋಮಣ್ಣಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಕಾಂಗ್ರೆಸ್ನವರು ಲಿಂಗಾಯತ ಸಿಎಂ ಅಂತ ಘೋಷಣೆ ಮಾಡಲಿ ಎಂಬ ಸಿಎಂ ಬೊಮ್ಮಾಯಿ ಮಾತಿಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನಲ್ಲಿ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಸ್ಕೃತಿ ಇಲ್ಲ. ಹೊಸದಾಗಿ ಆಯ್ಕೆ ಆದ ಶಾಸಕರು ಹಾಗೂ ಹೈಕಮಾಂಡ್ ಸಿಎಂ ಬಗ್ಗೆ ತೀರ್ಮಾನ ಮಾಡುತ್ತಾರೆ. ಇದು ಕಾಂಗ್ರೆಸ್ನ ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ ಎಂದು ಹೇಳಿದರು.
ಹೆಚ್. ವಿಶ್ವನಾಥ್ ಪಕ್ಷ ಸೇರ್ಪಡೆ ಆಗಿಲ್ಲ. ಯಾರು ಹೇಳಿದ್ದು ಅವರು ಸೇರ್ಪಡೆ ಆಗಿದ್ದಾರೆ. ಅವರು ಬೆಂಬಲ ಕೊಟ್ಟಿದ್ದಾರೆ ಅಷ್ಟೆ ಎಂದು ಹೇಳಿದರು.
RELATED TOPICS:
English summary :There is no culture of announcing CM candidate in advance in Congress