ಪ್ರಿಯಕರನ ಬ್ಲ್ಯಾಕ್ಮೇಲ್, ನವವಿವಾಹಿತೆ ಆತ್ಮಹತ್ಯೆ | JANATA NEWS
ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.
ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.
ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.
ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.
ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.
ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.