Fri,May03,2024
ಕನ್ನಡ / English

ಬೆಂಗಳೂರಿಗೆ ಪ್ರತ್ಯೇಕ ಜನತಾ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ | JANATA NEWS

06 May 2023
2204

ಬೆಂಗಳೂರು : ಜಾತ್ಯಾತೀತ ಜನತಾದಳ (JDS) ಪಕ್ಷವು ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕವಾಗಿ 'ಜನತಾ ಪ್ರಣಾಳಿಕೆ 2023' ಬಿಡುಗಡೆ ಮಾಡಿದೆ. ಈ ಮೂಲಕ ನಗರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದಾಗಿ ಪಕ್ಷ ಹೇಳಿಕೊಂಡಿದೆ.

ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೆಗೌಡ, ಎಚ್‌ಡಿ ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜನತಾ ಪ್ರಣಾಳಿಕೆ ಪುಸ್ತಕವನ್ನ ಬಿಡುಗಡೆ ಮಾಡಿದ್ದಾರೆ.

ಜೆಡಿಎಸ್​ನ ಪ್ರಣಾಳಿಕೆಯಲ್ಲಿ ಮುಖ್ಯವಾಗಿ 8 ಭರವಸೆ-
ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ
ಮಹಾನಗರ ಪಾಲಿಕೆ ಆಡಳಿತ ಸುಧಾರಣೆ
ಶಿಕ್ಷಣ
ಆರೋಗ್ಯ
ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ
ನಗರದಲ್ಲಿ ಹಸಿರಿಕರಣ ಮತ್ತು ಅರಣ್ಯೀಕರಣ
ನಗರದಲ್ಲಿನ ಕಣಿವೆ, ಕೆರೆಗಳ ಸಂರಕ್ಷಣೆ, ಕಾಲುವೆಗಳ ಪುನಶ್ಚೇತನ
ಕೋರಮಂಗಲ – ಚೆಲ್ಲಗಘಟ್ಟ ವ್ಯಾಲಿ ಏತ ನೀರಾವರಿ ಯೋಜನೆಯ ಆಧುನಿಕರಣ

ಬೆಂಗಳೂರಿನ ಜನತೆಗಾಗಿ ಜೆಡಿಎಸ್ ತರಲಿರುವ ಯೋಜನೆಗಳು

* 'ಸಾಮಾಜಿಕ ಭದ್ರತೆ ಮತ್ತು ಆರೋಗ್ಯ ಶ್ರೀರಕ್ಷೆಯಡಿ' ಬಡವರಿಗೆ-ಕಾರ್ಮಿಕರಿಗೆ ಮನೆ ಕಲ್ಪಿಸಿಕೊಡಲಾಗುವುದು.

* ವಿವಿಧ ಯೋಜನೆಗಳಡಿ ಮಕ್ಕಳು ಸೇರಿದಂತೆ ಎಲ್ಲರಿಗೆ ನಿಯತಕಾಲಿಕವಾಗಿ ಉಚಿತ ಲಸಿಕೆ.

* ಮಾಸಿಕ 10ಕೆ.ಜಿ. ಅಕ್ಕಿ ಉಚಿತ ವಿತರಣೆ.

* ರಾಜ್ಯದಲ್ಲಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುವುದು.

* ಖಾಸಗಿ ಶಾಲಾ ಶಿಕ್ಷಕರಿಗೆ, ಆಟೋ ಚಾಲಕರಿಗೆ, ಬೀದಿ ದೀಪಗಳಿಗೆ ಮತ್ತು ವ್ಯಾಪಾರಿಗಳಿಗೆ ಭದ್ರತೆ

* ಬೆಂಗಳೂರು ನಗರದಲ್ಲಿ ಶೌಚಾಲಯ ವ್ಯವಸ್ಥೆ

* ಶೌಚ ಗುಂಡಿ ಕರ ಸ್ವಚ್ಛತೆ ನಿರ್ಮೂಲನೆ

ಮಹಾನಗರ ಪಾಲಿಕೆ ಆಡಳಿತ ಸುಧಾರಣೆ

* ಹದಗೆಟ್ಟ ಪಾಲಿಕೆ ಆಡಳಿತ ಸುಧಾರಣೆಗೆ ಸರಳ ವ್ಯವಸ್ಥೆ ಜಾರಿ.

* ತೆರಿಗೆ ವಂಚಿತರ ವಿರುದ್ಧ ವಸೂಲಾತಿಗೆ ಕ್ರಮ

* ಎಲ್ಲ ಕಾಮಗಾರಿಗಳ ಆರಂಭಕ್ಕೆ ಅಗತ್ಯ ಕ್ರಮ ಮತ್ತು ಟೆಂಡರ್ ಆಹ್ವಾನಕ್ಕೆ ಕ್ರಮ.

* 110 ಹಳ್ಳಿಗಳಿಗೆ ಪೈಪ್‌ಲೈನ್ ವಿಸ್ತರಿಸಿ ಕಾವೇರಿ ನೀರು ಪೂರೈಕೆಗೆ ಕ್ರಮ

* ತ್ಯಾಜ್ಯ ನಿರ್ವಹಣೆ-ವಿಲೇವಾರಿಗೆ ಕ್ರಮ, ಮರುವಿನ್ಯಾಸಗೊಳಿಸುವುದು.

ಶಿಕ್ಷಣವೇ ಆಧುನಿಕ ಶಕ್ತಿ

* ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಆಡಳಿತ ಸುಧಾರಣೆ.

* ಜಿಲ್ಲಾ ಶಾಲಾ ಶಿಕ್ಷಣ ಪರಿಷತ್ ಸ್ಥಾಪನೆ

* ಹೊಸ ಶಿಕ್ಷಣ ನೀತಿಯನ್ನು ಮದರಸಾ, ಅಲ್ಪಸಂಖ್ಯಾತ ಸಮುದಾಯ ನಿರ್ವಹಣೆಯ ಶಾಲೆ ಒಳಗೊಂಡಂತೆ ಎಲ್ಲ ಶಾಲೆಗಳಲ್ಲಿ ಕಡ್ಡಾಯ ಜಾರಿಗೆ ಕ್ರಮ

* ಸರ್ಕಾರಿ ವಲಯದ ಶಾಲೆಗಳ ಅಭಿವೃದ್ಧಿಗೆ ಕ್ರಮ

ಆರೋಗ್ಯ ಶ್ರೀರಕ್ಷೆಗೆ ಜೆಡಿಎಸ್ ಭರವಸೆ

* ಸಾರ್ವಜನಿಕ ಆರೋಗ್ಯ ದೃಷ್ಟಿಕೋನ ಮತ್ತು ರೋಗ ನಿವಾರಕ ದೃಷ್ಟಿಕೋನದಲ್ಲಿ ನಗರದ ನಾಗರಿಕರ ಆರೋಗ್ಯ ಕಾಪಾಡಲಾಗುವುದು.

* ತ್ಯಾಜದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲಾಗುವುದು.

* ಪ್ರತಿ ವಾರ್ಡ್‌ನಲ್ಲಿ 30ಹಾಸಿಗೆ ವುಳ್ಳ ಸುಸಜ್ಜಿತ ಆಸ್ಪತ್ರೆ ಸ್ಥಾಪನೆ

* ಈ ಆಸ್ಪತ್ರೆಗಳಲ್ಲಿ 24x7 ನಿರಂತರ ಆರೋಗ್ಯ ಸೇವೆ ಲಭ್ಯವಾಗುಂತೆ ಮಾಡುವುದು.

* ನಗರದ ಸ್ವಚ್ಛವಾಗಿಡಲು ಲಭ್ಯವಿರುವ ತಂತ್ರಜ್ಞಾನ ಕುರಿತು ಪ್ರತಿ ವರ್ಷ ನಗರಾದ್ಯಂತ ವಸ್ತು ಪ್ರದರ್ಶನ ಆಯೋಜಿಸಲಾಗುವುದು.

* ಬೆಂಗಳೂರು ಸಾರ್ವಜನಿಕರ ಆರೋಗ್ಯ ಮಂಡಳಿ ರಚನೆ.

ಕೆರೆ ಕಣಿವೆಗಳ ಸಂರಕ್ಷಣೆ-ರಾಜಕಾಲುವೆ ಪುನಶ್ಚೇತನ

* ರಾಜಕಾಲುವೆ ಒತ್ತುವರಿ ತೆರವು ಮಾಡಿ ನಗರ ಪುನರ್ ನಿರ್ಮಾಣ

* ನಗರದ ಕುಡಿಯುವ ನೀರಿನ ಕ್ಷಾಮ ಬಗೆಹರಿಸಲು ಕ್ರಮ

* ಕೋರಮಂಗಲ ಮತ್ತು ಚೆಲ್ಲಘಟ್ಟ ವ್ಯಾಲಿ ಏತ ನೀರಾವರಿ ಯೋಜನೆ ಆಧುನಿಕರಣ

* ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲು ಭಗೀರಥ ಪ್ರಯತ್ನ.

ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ

* ಮುಂಬೈ, ಹೈದರಾಬಾದ್, ಚೆನ್ನೈ ನಗರಗಳಂತೆ ಬೆಂಗಳೂರಿನಲ್ಲಿ ಕೇಂದ್ರ ರೈಲ್ವೆ ಇಲಾಖೆ ಸಹಕಾರದಲ್ಲಿ ವಿವಿಧ ಭಾಗದಲ್ಲಿ ರೈಲ್ವೆ ಅಭಿವೃದ್ಧಿ ಮಾಡಿ ಸುಗಮ ಸಂಚಾರಕ್ಕೆ ಅವಕಾಶ.

* ನಮ್ಮ ಮೆಟ್ರೋ ಎಡ-ಬಲ ಪಾರ್ಶ್ವದ ಪ್ರದೇಶಗಳ ವಿಸ್ತರಣೆ.

* ಉದ್ದೇಶಿತ ಮೆಟ್ರೋ ನಿಲ್ದಾಣಗಳಿಗೆ ಬೆಳಗ್ಗೆ 7ರಿಂದ ರಾತ್ರಿ 10ರವರೆಗೆ ಪ್ರಯಾಣಿಕರಿಗೆ ಎಲೆಕ್ಟ್ರಿಕ್ ಬಸ್ ಸೇವೆ ಲಭ್ಯವಾಗುವಂತೆ ಮಾಡಲಾಗುವುದು.

* ಮೆಟ್ರೋ ರೈಲ್ವೆ ಜಾಲ ಬಲಪಡಿಸಲಾಗುವುದು.

* ನಗರದ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿ ಮತ್ತು ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ

* ನಗರದಲ್ಲಿನ ವಾಹನ ದಟ್ಟಣೆಗೆ ಕಡಿಮೆಗೊಳಿಸಲು ವಿನೂತನ ಕ್ರಮ ಕೈಗೊಳ್ಳಲಾಗುವುದು.

* ದಶಕಗಳಿಂದ ನೆನೆಗುದಿಗೆ ಬಿದ್ದ ಬೆಂಗಳೂರು ಹೊರ ವರ್ತುಲ ರಸ್ತೆ (PRR) ಕಾಮಗಾರಿ ತ್ವರಿತ ಪೂರ್ಣಕ್ಕೆ ಆದ್ಯತೆ.

* 163 ಜಂಕ್ಷನ್‌ಗಳಲ್ಲಿ ಆಟೋ ಮ್ಯಾಟಿಕ್ ಸಿಗ್ನಲ್ ಸ್ಥಾಪನೆ ಮತ್ತು ಅಪಘಾತದ ಬ್ಲಾಕ್ ಸ್ಟಾಟ್‌ಗಳ ಅಭಿವೃದ್ಧಿ.

* ರಸ್ತೆಗುಂಡಿಗಳ ಮುಚ್ಚುವ ದುರಸ್ಥಿ ಕಾರ್ಯವನ್ನು ಒಂದರಿಂದ ಎರಡು ದಿನದಲ್ಲಿ ಮುಗಿಸಲು ವ್ಯವಸ್ಥೆ.

* ಸಾರ್ವಜನಿಕರಿಗಾಗಿ ಸ್ನೇಹಮಯಿ ಪಾದಾಚಾರಿ ರಸ್ತೆಗಳ ನಿರ್ಮಾಣ.

ಬೆಂಗಳೂರು ಹಸರೀಕರಣ-ಅರಣ್ಯೀಕರಣ

* ನಗರದಲ್ಲಿ ಗಿಡ ನೆಡುವ ಕಾರ್ಯಕ್ರಮ ಆರಂಭಿಸಲಾಗುವುದು

* 110 ಹಳ್ಳಿಗಳಲ್ಲಿ 300 ಸಾರ್ವಜನಿಕ ಉದ್ಯಾನ ಸ್ಥಾಪನೆ

* ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಕ್ರಮ

* ಸೋಲಾರ್ ಬೀದಿ ದೀಪ ಬಳಕೆಗೆ ಉತ್ತೇಜನ.

* ಕುಟುಂಬಗಳಿಗೆ (ಮನೆ), ಸರ್ಕಾರಿ ಕಚೇರಿಗಳಲ್ಲಿ ಸೋಲಾರ್ ದೀಪ ಬಳಸುವಂತೆ ಉತ್ತೇಜನ

RELATED TOPICS:
English summary :JDS has released a separate Janata Manifesto for Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...