ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ! | JANATA NEWS
ಮೈಸೂರು : ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಬರುವವರೆಗೆ ರಾಜಕೀಯ ನಾಯಕರು ವಿಶ್ರಾಂತಿ ಮೊರೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರಲ್ಲಿ ವಿಶೇಷ ಮನವಿ ಮಾಡಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿಯಾಗಿದೆ. ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ, ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದರು.
ಇನ್ನು ಇಂದು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಈ ಬಾರಿ 130 ರಿಂದ 150 ಸ್ಥಾನದವರೆಗೂ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿಕೊಂಡು ಬರುತ್ತಿದೆ. ಮತದಾನೋತ್ತರ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಪರವಾಗಿದೆ. ಅದರ ಪ್ರಕಾರ ಈ ಬಾರಿ ನಾವು ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲ್ಲುತ್ತದೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ.
— Siddaramaiah (@siddaramaiah) May 11, 2023
ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ.
ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು.
2/2