ನಾಳೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ | JANATA NEWS
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಮಧ್ಯರಾತ್ರಿಯವರೆಗೆ ನಗರದಾಧ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ನಾಳೆ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ ಎಣಿಕೆ ಹಿನ್ನಲೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು, ಹೀಗಾಗಿ ನಾಳೆ ಬೆಳಗ್ಗೆಯಿಂದಲೇ ಬಾರ್ ರೆಸ್ಟೋರೆಂಟ್ ಗಳು ಬಂದ್ ಇರಲಿವೆ.
ಈ ಕುರಿತಂತೆ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ನಾಳೆ ವಿಧಾನಸಭಾ ಚುನಾವಣೆಯ ಮತಎಣಿಕೆ ಹಿನ್ನಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಬಾರ್, ರೆಸ್ಟೋರೆಂಟ್ ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಲಾಗಿದೆ ಎಂದಿದ್ದಾರೆ.
ನಾಳೆ ಬೆಂಗಳೂರಿನಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಕೂಡ ಜಾರಿಗೊಳಿಸಲಾಗಿದೆ. ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಂಭ್ರಮಾಚರಣೆ ಮಾಡುವಂತಿಲ್ಲ. ಪಟಾಕಿ ಸಿಡಿಸುವುದು ಸೇರಿದಂತೆ ವಿವಿಧ ಆಚರಣೆಗಳಿಗೆ ನಿರ್ಬಂಧವನ್ನು ವಿಧಿಸಲಾಗಿದೆ.