Mon,May13,2024
ಕನ್ನಡ / English

ಸಿದ್ದರಾಮಯ್ಯ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರದೆ ಕುಂಟು ನೆಪ ಹೇಳುತ್ತಿದ್ದಾರೆ- ಬೊಮ್ಮಾಯಿ | JANATA NEWS

21 May 2023
1603

ಬೆಂಗಳೂರು : ಕಾಂಗ್ರೆಸ್ ನೂತನ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರದೆ ಕುಂಟು ನೆಪ ಹೇಳುತ್ತಿದ್ದಾರೆ, ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಟುವಾಗಿ ಟೀಕಿಸಿದ್ದು, ಸುವಿಸ್ತಾರವಾಗಿ ಮಾಹಿತಿ ಹೊರಹಾಕಿದ್ದಾರೆ.

ಈ ಕುರಿತು ಹೇಳಿರುವ ಮಾಜಿ ಸಿಎಂ ಬೊಮ್ಮಾಯಿ ಅವರು, "ಮನಸ್ಸಿದ್ದರೇ ಮಾರ್ಗ-ಮನಸ್ಸಿಲ್ಲದಿದ್ದರೇ ನೆಪ"ಕಾಂಗ್ರೆಸ್ ನ ಗೃಹಲಕ್ಷ್ಮಿ ಯೋಜನೆಯನ್ನು ಬೇಕಿದ್ದರೇ ನಾಳೆಯಿಂದಲೇ ಆರಂಭಿಸಬಹುದು.ಫಲಾನುಭವಿಗಳ ಬ್ಯಾಂಕ್ ಖಾತೆಯ ನಂಬರ್ ಇಂದ ಹಿಡಿದು ಸಂಪೂರ್ಣ ಮಾಹಿತಿ ಇಲಾಖೆಯಲ್ಲಿ ಲಭ್ಯವಿದೆ. ಆದರೇ ಫಲಾನುಭವಿಗಳ ಪಟ್ಟಿಯನ್ನು ನಾವು ಜಿಲ್ಲಾವಾರು ತರಿಸಿಕೊಳ್ಳುತ್ತೇವೆ ಎಂಬ ಕುಂಟು ನೆಪ ಹೇಳುತ್ತಿದ್ದಾರೆ.

ಇಂಧನ ಇಲಾಖೆಯಲ್ಲಿ ಸಹ ಎಲ್ಲಾ ರೀತಿಯ ಮಾಹಿತಿ ಇದೆ. ಆದರೇ ಆ ಯೋಜನೆ ಜಾರಿ ಬಗ್ಗೆ ಸಹ ಸ್ಪಷ್ಟತೆ ಇಲ್ಲ. 2022-23ನೆ ಸಾಲಿನ ಪದವಿಧರ ನಿರುದ್ಯೋಗಿಗಳಿಗೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಆದರೇ ಚುನಾವಣಾ ಪೂರ್ವದಲ್ಲಿ ಎಲ್ಲಾ ನಿರುದ್ಯೋಗಿಗಳಿಗೆ ನೀಡುತ್ತೇವೆ ಎಂದು ಹೇಳಿದ್ದರು. ಈ ಘೋಷಣೆಯಲ್ಲಿಯೂ ಸಹ ಕಾಂಗ್ರೆಸ್ ನುಡಿದಂತೆ ನಡೆದಿಲ್ಲ.

ಇದೆಲ್ಲವನ್ನೂ ಗಮನಿಸಿದರೇ ರಾಜ್ಯದಲ್ಲಿ ನಿರುದ್ಯೋಗ ಹೆಚ್ಚಳವಾಗುತ್ತದೆ , ಬಸ್ ಗಳ ಓಡಾಟ ಕಡಿಮೆಯಾಗುತ್ತದೆ ಹಾಗೂ ವಿದ್ಯುಚ್ಛಕ್ತಿ ಕಡಿತವಾಗುತ್ತದೆ. ಇದಿಷ್ಟೇ ಕಾಂಗ್ರೆಸ್ ಈ ರಾಜ್ಯದ ಜನತೆಗೆ ನೀಡುವ ಗ್ಯಾರಂಟಿ ಗಳಾಗುತ್ತವೆ.

ಸಿದ್ದರಾಮಯ್ಯನವರು 2013ರಲ್ಲಿ ಅಧಿಕಾರ ಸ್ವೀಕರಿಸುವ ಮುನ್ನ, ಈ ಹಿಂದೆ 70 ವರ್ಷ ರಾಜ್ಯವನ್ನು ಆಳಿದ ಎಲ್ಲಾ ಸರ್ಕಾರಗಳು ಸೇರಿ ಮಾಡಿದ್ದ ಒಟ್ಟು ಸಾಲ ₹1 ಲಕ್ಷ ಕೋಟಿ. ಆದರೇ ಕೋವಿಡ್, ಅತಿವೃಷ್ಟಿ, ಅನಾವೃಷ್ಟಿ ಅಂತಹ ಯಾವುದೇ ತೊಂದರೆ ಬಾರದಿದ್ದರೂ, ತಮ್ಮ ಹಿಂದಿನ 5 ವರ್ಷ ಅವಧಿಯಲ್ಲಿ ಮಾಡಿದ ಒಟ್ಟು ಸಾಲ ₹1 ಲಕ್ಷ 43 ಸಾವಿರ ಕೋಟಿ.

ಈಗ ಹೇಳಿ ಯಾರು ಹೆಚ್ಚು ಸಾಲ ಮಾಡಿದ್ದು ಎಂಬುದನ್ನು..??

ನಮ್ಮ ಅವಧಿಯಲ್ಲಿ ₹3 ಲಕ್ಷ ಕೋಟಿಯನ್ನು ಸಾಲ ಮಾಡಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ನಾನು ವಿಧಾನಸಭೆಯಲ್ಲಿ ಸಹ ಉತ್ತರ ನೀಡಿದ್ದೆ. ಕೋವಿಡ್ ಸಾಂಕ್ರಾಮಿಕ ರೋಗದಿಂದ ಸಂಪೂರ್ಣ ಜಗತ್ತೇ ಆರ್ಥಿಕ ಸಂಕಷ್ಟದಲ್ಲಿತ್ತು. ಹಾಗಾಗಿ ಆರ್ಥಿಕತೆಗೆ ಇಂಬು ನೀಡಲು ಕೇಂದ್ರ ಸರ್ಕಾರವೇ ಹೆಚ್ಚು ಸಾಲ ಮಾಡಲು ಅವಕಾಶ ಕಲ್ಪಿಸಿತು. ಕೇವಲ ಕರ್ನಾಟಕ ಅಲ್ಲದೇ, ದೇಶದ ಎಲ್ಲಾ ರಾಜ್ಯಗಳು ಸಹ ಸಾಲ ಮಾಡಿವೆ.

ನಾನು ಜಿ.ಎಸ್.ಟಿ ಮಂಡಳಿಯಲ್ಲಿ ಇದ್ದರೂ ಏನು ಮಾಡಲಿಲ್ಲ ಎಂಬ ಅರ್ಥದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಆದರೇ ಅವರು ಎತ್ತಿರುವ 15ನೇ ಹಣಕಾಸಿನ ಆಯೋಗಕ್ಕೂ, ಜಿ.ಎಸ್.ಟಿ ಮಂಡಳಿಗೂ ಯಾವುದೇ ಸಂಬಂಧ ಇಲ್ಲ.

ಅವರು ಪ್ರಸ್ತಾಪಿಸುವ ₹5000ಕೋಟಿ ಬಗ್ಗೆ ಸಹ ನಾನು ವಿಧಾನಸಭೆಯಲ್ಲಿ ಉತ್ತರ ನೀಡಿದ್ದೇನೆ. ಒಂದು ಸುಳ್ಳನ್ನು ಪದೇ ಪದೇ ಹೇಳಿದರೇ, ಅದು ಸತ್ಯವಾಗುವುದಿಲ್ಲ ಎಂಬುದನ್ನು ಸಿದ್ದರಾಮಯ್ಯನವರು ಅರಿತುಕೊಳ್ಳಬೇಕು. ಕೇಂದ್ರ ಸರ್ಕಾರ ಸಬರ್ಬನ್, ಮೆಟ್ರೋ, ರೈಲ್ವೇ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಯಾವ ಸರ್ಕಾರ ನೀಡದಷ್ಟು ಅನುದಾನವನ್ನು ನೀಡಿ, ಯೋಜನೆಗಳು ಈಗಾಗಲೇ ಕಾರ್ಯಾರಂಭವಾಗಿವೆ. ಆದರೇ ಸಿದ್ದರಾಮಯ್ಯ ಸುಳ್ಳನ್ನು ಹೇಳಿ ಜನರನ್ನು ಯಾಮಾರಿಸುತ್ತಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಅಂಕಿ ಅಂಶಗಳೊಂದಿಗೆ ಅವರಿಗೆ ತಕ್ಕ ಉತ್ತರ ನೀಡಲು ಸಿದ್ಧನಿದ್ದೇನೆ.

ಆದಾಯವನ್ನು ಹೇಗೆ ಹೆಚ್ಚಿಸಬಹುದೆಂಬುದು ನಾನು ನೀಡಿದ ಬಜೆಟ್ ನಲ್ಲಿ ಸ್ಪಷ್ಟವಾಗಿ ಗಮನಿಸಬಹುದಾಗಿದೆ. ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಿಂತ ಶೇ.16ರಷ್ಟು ಹೆಚ್ಚು ಆದಾಯವನ್ನು ನಾವು ಸಾಧಿಸಿದ್ದೇವೆ. ಕೇಂದ್ರ ಸರ್ಕಾರ ಸಹ ತನ್ನ ಪಾಲಿಗಿಂತ ಶೇ.17ರಷ್ಟು ಹೆಚ್ಚು ಅನುದಾನವನ್ನು ನೀಡಿದೆ. ಆದರೇ ಸಿದ್ದರಾಮಯ್ಯ ಅರ್ಧ ಸತ್ಯ ಹೇಳುವ ಮೂಲಕ ರಾಜ್ಯದ ಜನತೆಯ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ, ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾಲು ಸಾಲು ಟ್ವೀಟ್ ಮಾಡಿದ್ದಾರೆ.

English summary : Siddaramaiah is making a lame excuse for not implementing the guarantees given during the election - Bommai

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...