ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ | JANATA NEWS
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮದ ಪ್ರಯುಕ್ತ ಇಂದು ಆರದೇಶಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆ, ಬಸವನಪುರದ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆಯ ಸರ್ಕಾರಿ ಫ್ರೌಢ ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಪ್ರೋತ್ಸಾಹಕಗಳಾದ ಪಠ್ಯ, ಪುಸ್ತಕ, ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿ ಶಾಲಾ ಪುನರಾರಂಭಕ್ಕೆ ಸಿಹಿ ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲವಾಗಿರಲೆಂದು ಹಾರೈಸಿ ಶುಭಕೋರಿದೆನು, ಎಂದಿದ್ದಾರೆ.
ಬೇಸಿಗೆ ರಜೆಯ ಮಜಾ ಸವಿದ ಮಕ್ಕಳು ಈಗ ಮತ್ತೆ ಶಾಲೆ ಕಡೆಗೆ ಮುಖ ಮಾಡುವ ಗಳಿಗೆ ಬಂದಿದೆ, ಬುಧವಾರದಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ಕಲರವ ರಂಗೇರಿದೆ. ಶಾಲೆಗಳ ಪ್ರಾರಂಭೋತ್ಸವದ ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.