ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ! | JANATA NEWS
ಬೆಂಗಳೂರು : ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ ಎಂದು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, ಅದನ್ನು ಖರ್ಚು ಮಾಡಿಲ್ಲ ಎಂದು ಹೇಳಿದರು.
ನಮಗೇನು ತಮಿಳುನಾಡಿನ ಮೇಲೆ ದ್ವೇಷ ಇಲ್ಲ, ಅವರೊಂದಿಗೆ ಯುದ್ದ ಮಾಡಬೇಕೆಂದಿಲ್ಲ. ಅಲ್ಲಿರುವವರು ನಮ್ಮ ಅಣ್ಣ- ತಮ್ಮಂದಿರು. ಅಲ್ಲಿರುವವರ ಅಣ್ಣ-ತಮ್ಮಂದಿರು ಇಲ್ಲಿದ್ದಾರೆ. ಯಾರ ಮೇಲೂ ದ್ವೇಷ-ಅಸೂಯೆ ಮಾಡಬೇಕಾಗಿಲ್ಲ” ಎಂದರು.
”ಮೇಕೆದಾಟು ಯೋಜನೆ ನಮ್ಮ ಯೋಜನೆ. ತಮಿಳುನಾಡಿನವರಿಗೂ ಅನುಕೂಲ ಆಗುತ್ತದೆ. ಸಮುದ್ರಕ್ಕೆ ಹೋಗುವಂತಹ ನೀರಿನಿಂದ ಅವರಿಗೂ ಅನುಕೂಲ ಆಗುತ್ತದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಎಲ್ಲಾ ರೈತರಿಗೆ ನಾವು ಸಾಹಾಯ ಮಾಡಬಹುದು. ಬೀಗ ನಮ್ಮ ಹತ್ತಿರ ಇಲ್ಲ, ಕೇಂದ್ರ ಸರಕಾರದ ಹತ್ತಿರ ಇದೆ.ಎಷ್ಟು ನೀರನ್ನು ನಾವು ಅವರಿಗೆ ಬಿಡಬೇಕೋ ಆ ನೀರನ್ನು ನಾವು ಬಿಡಲು ಈಗಾಗಲೇ ಆದೇಶಗಳಾಗಿವೆ. ನಮ್ಮ ರಾಜ್ಯದ ರಕ್ಷಣೆ ಮಾಡುತ್ತೇವೆ. ನಮ್ಮಲ್ಲಿ ಜಲ ವಿದ್ಯುತ್ ಸ್ಥಾವರ ಮಾಡುವುದರಿಂದ ಅವರಿಗೇನಾದರೂ ನಷ್ಟವಿದೆಯಾ” ಎಂದು ಪ್ರಶ್ನಿಸಿದರು.
ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ಹೀಗಾಗಿ ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು.
ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.
ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ, ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ.
— DK Shivakumar (@DKShivakumar) June 1, 2023
3/3