ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು | JANATA NEWS
ಚಾಮರಾಜನಗರ : ಹೆಚ್.ಮೂಕಳ್ಳಿ ಬಳಿಯ ಭೋಗಪುರದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಲಘು ವಿಮಾನ ಪತನಗೊಂಡು ಧಗ ಧಗನೆ ಹೊತ್ತಿ ಉರಿದಿತ್ತು.
ವಿಮಾನದಲ್ಲಿದ್ದ ತರಬೇತುದಾರ ವಿಂಗ್ ಕಮಾಂಡರ್ ತೇಜಪಾಲ್ (50 ವ) ಮತ್ತು ತರಬೇತಿ ಪಡೆಯುತ್ತಿದ್ದ ಭೂಮಿಕಾ (28) ಅವರು ವಿಮಾನ ಅಪಘಾತದ ಸುಳಿಗೆ ಸಿಲುಕುತ್ತಿದ್ದಂತೆ ಇಬ್ಬರು ಪೈಲಟ್ಗಳು ಪ್ಯಾರಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್ಎಎಲ್ನ ಸೇನಾ ಹೆಲಿಕಾಪ್ಟರ್ಗಳು ಪೈಲಟ್ಗಳಾದ ತೇಜ್ ಪಾಲ್ ಹಾಗೂ ಭೂಮಿಕಾ ಇಬ್ಬರನ್ನೂ ಏರ್ಲಿಫ್ಟ್ ಮೂಲಕ ರವಾನೆ ಮಾಡಿದ್ದರು. ಇಬ್ಬರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ವಿಮಾನ ಪತನಗೊಂಡಿದೆ ಎನ್ನಲಾಗಿದೆ.
RELATED TOPICS:
English summary :Jet Crash in chamarajanagar, pilots jumped with parachute