ಒಡಿಶಾ ರೈಲು ದುರಂತ, ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ | JANATA NEWS
ಬೆಂಗಳೂರು : ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಚೆನ್ನೈ ಕಡೆಗೆ ಹೊರಟಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಹಳಿತಪ್ಪಿದಾಗ ಈ ಭೀಕರ ಅಪಘಾತ ಸಂಭವಿಸಿದೆ. ಮೂರು ರೈಲುಗಳ ಭೀಕರ ಸರಣಿ ಅಪಘಾತದ ಪರಿಣಾಮ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 900 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗ ಈ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ "ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ"ಎಂದು ಹೇಳಿದ್ದಾರೆ.
ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.
— Siddaramaiah (@siddaramaiah) June 3, 2023
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು…