ಸಬ್ ಇನ್ಸ್ಪೆಕ್ಟರ್ ಪತ್ನಿ ಅನುಮಾನ್ಪದ ಸಾವು, ಪತಿಯ ವಿರುದ್ಧ ಆರೋಪ | JANATA NEWS
ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪತ್ನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬೇಗೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶಿಲ್ಪಾ (33) ಎಂದು ಗುರುತಿಸಲಾಗಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಪಟೇಲ್ ಲೇಔಟ್ನಲ್ಲಿ ನಡೆದಿದ್ದು ಆತ್ಮಹತ್ಯೆ ಬಗ್ಗೆ ಪೊಲೀಸರು ಮರೆಮಾಚುತ್ತಿದ್ದಾರೆ ಎಂದು ಯುವತಿ ಕುಟುಂಬಸ್ಥರು ಆರೋಪಿಸಿ, ಮಹಿಳೆಯ ಪತಿ ರಮೇಶ್ ಅವರ ಮೇಲೆ ಶಿಲ್ಪಾ ಪೊಷಕರು ಕೊಲೆ ಆರೋಪ ಹೊರಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ ರಮೇಶ್ ಹಾಗೂ ಶಿಲ್ಪಾ ಕಾಲೇಜು ಸಮಯದಿಂದಲೂ ಪೀತಿಸುತಿದ್ದರು, ನಂತರ ವಿವಾಹವಾಗಿದ್ದರು. ಮದುವೆಯಾದ ಬಳಿಕ ದಂಪತಿ ನಡುವೆ ಜಾತಿ ವಿಚಾರಕ್ಕೆ ಕಿತ್ತಾಟವಾಗುತ್ತಿತ್ತು. ಪತ್ನಿ ಪರಿಶಿಷ್ಟ ಜಾತಿ(SC)ಗೆ ಸೇರಿದವಳು ಎಂದು ಪತಿ ನಿಂದಿಸುತ್ತಿದ್ದ. ಅಲ್ಲದೆ ನಿರಂತರ ಪತ್ನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಈ ಸಂಬಂಧ ರಾಜಿ ಪಂಚಾಯಿತಿ ನಡೆಸಿ ಇಬ್ಬರಿಗೂ ಮದುವೆ ಮಾಡಿಸಲಾಗಿತ್ತು. ಜಾತಿನಿಂದನೆ ವಿಚಾರವಾಗಿ ಸಬ್ ಇನ್ಸ್ಪೆಕ್ಟರ್ ರಮೇಶ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿತ್ತು.
ಕಳೆದ ಐದಾರು ವರ್ಷಗಳಿಂದ ಲಿವಿಂಗ್ ಟುಗೇದರ್ ರಿಲೇಷನ್ಶಿಪ್ನಲ್ಲಿದ್ದರು ಎಂದು ತಿಳಿದು ಬಂದಿದ್ದು ರಮೇಶ್ ಶಿಲ್ಪಾರನ್ನು ಮದುವೆಯಾಗಲು ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
ಹಠಬಿಡದ ಯುವತಿ ಶಿಲ್ಪಾ ಪೊಲೀಸರ ಸಮ್ಮುಖದಲ್ಲಿ ರಮೇಶ್ರನ್ನು ರಿಜಿಸ್ಟಾರ್ ವಿವಾಹವಾಗಿದ್ದರು. ವಿವಾಹದ ಬಳಿಕ ಮನೆಯವರು ಒಪ್ಪುತ್ತಿಲ್ಲ ಎಂಬ ಕಾರನಕ್ಕೆ ಪತ್ನಿಗೆ ಬೇರೊಂದು ಮನೆಯನ್ನು ಮಾಡಿದ್ದರು. ಆದರೆ, ಜೀವನ ನಡೆಸಲು ಯಾವುದೇ ಆರ್ಥಿಕ ಸಹಾಯ ನೀಡುತ್ತಿರಲಿಲ್ಲ.
ಮದುವೆಯಾದ ಬಳಿಕ ರಮೇಶ್ ಶಿಲ್ಪಾ ಅವರ ಮೇಲೆ ಪದೇ ಪದೇ ಜಾತಿ ನಿಂದನೆ ಮಾಡುತ್ತಿದ್ದರು. ತನ್ನ ಅಕ್ಕನ ಮಗಳನ್ನು ಮದುವೆಯಾಗಲು ನೀನು ಅಡ್ಡಿಯಾಗಿದ್ದೀಯ ಸೆಟಲ್ಮೆಂಟ್ ಮಾಡಿಕೊಂಡು ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪತಿ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ದೂರಿದ್ದಾರೆ.
ಶುಕ್ರವಾರ ರಾತ್ರಿ ಕುಟುಂಬದವರ ಜೊತೆ ಫೋನಿನಲ್ಲಿ ಮಾತನಾಡಿದ್ದ ಶಿಲ್ಪಾ ಖರ್ಚಿಗೆ ಹಣ ಬೇಕು ಎಂದು ಹಾಕಿಸಿಕೊಂಡಿದ್ದಳು. ಆದರೆ ಇಂದು ಬೆಳಗ್ಗೆ ಮನೆಯ ಮಾಲೀಕರು ಬಾಗಿಲು ತೆರೆಯುತ್ತಿಲ್ಲ ಎಂದು ಕುಟುಂಬದವರಿಗೆ ತಿಳಿಸಿದ್ದಾರೆ.
ವಿಷಯ ತಿಳಿದು ನಾವು ಮನೆಗೆ ಭೇಟಿ ನೀಡುವಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ. ಕುಟುಂಬದವರು ಬರುವ ಮುನ್ನವೇ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪತಿ ರಮೇಶ್ ಕೊಲೆ ಮಾಡಿರುವ ಅನುಮಾನವಿದೆ. ಕಾನೂನು ರೀತಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಯುವತಿ ಕುಟುಂಬಸ್ಥರು ಆಗ್ರಹಿಸಿದ್ದಾರೆ.