ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ | JANATA NEWS
ಲಖನೌ : ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜೊತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ನಿಖಿಲ್ ಅವರು ವಿವರಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು.@yadavakhilesh@samajwadiparty@JanataDal_S
— Nikhil Kumar (@Nikhil_Kumar_k) June 15, 2023
1/5 pic.twitter.com/pLCBhaWE2Y