ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ! | JANATA NEWS
ಬೆಂಗಳೂರು : ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಹೆಡ್ಗೆವಾರ್ಗೆ ಪಠ್ಯಕ್ಕೆ ಕೋಕ್ ನೀಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ರ ಕವನ ಪಠ್ಯಕ್ಕೆ ಸೇರಿಸಲಿದೆಯಂತೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ನಂತರ ಮಾತಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10 ನೇ ತರಗತಿಯವರೆಗಿನ ಸಾಮಾಜಿಕ ವಿಜ್ಞಾನ ಮತ್ತು ಕನ್ನಡ ಪಠ್ಯ ಪುಸ್ತಕಗಳಲ್ಲಿ ಮಾಡಿರುವ ಪರಿಷ್ಕರಣೆ ಗಳ ಬಗ್ಗೆ ವಿವರಣೆ ನೀಡಿದರು.
ಪಠ್ಯಗಳಿಂದ ಹಿಂದಿನ ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು. ಕೆ.ಬಿ. ಹೆಡ್ಗೆವಾರ್ ಮತ್ತು ವಿನಾಯಕ ದಾಮೋದರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ತೆಗೆದು. ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕವನ ಪಠ್ಯಕ್ಕೆ ಸೇರಿಸಲು ಸರ್ಕಾರ ನಿರ್ಧರಿಸಿದೆ.
ಸಾವಿತ್ರಿ ಪುಲೆ, ನೀ ಹೋದ ಮರುದಿನ, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ತಮ್ಮ ಮಗಳು ಇಂದಿರಾಗಾಂಧಿಯವರಿಗೆ ಬರೆದ ಪತ್ರ ಮೊದಲಾದ ಪಾಠಗಳನ್ನು ಸೇರಿಸಲಾಗಿದೆ ಎಂದು ಸಚಿವರು ಹೇಳಿದರು.