ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್! | JANATA NEWS
ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ಗಳಿಂದ ಬೆಂಬಲ ದೊರಕಿದೆ.
ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.
ಈ ಹಿನ್ನಲೆಯಲ್ಲಿ ಕೆಸಿಸಿ&ಐ, ಎಸ್ಕಾಂನ ವಿದ್ಯುತ್ ದರ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್ಗೆ ಕರೆ ನೀಡಲಾಗಿದೆ.
ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆಯಲ್ಲಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಬಂದ್ಗೆ ಕರೆ ನೀಡಿದ್ದೇವೆ. ಈ ಮೂಲಕವಾದರು ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದೆ.