ಬಾಯಿಗೆ ಬಟ್ಟೆತುರುಕಿ ಉಸಿರುಗಟ್ಟಿಸಿ ಮಹಿಳೆಯ ಕೊಲೆ | JANATA NEWS
ಶಿವಮೊಗ್ಗ : ನೀರಾವರಿ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ.
ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.
ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನ ಅವರ ಪತ್ನಿ. ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದರು.
ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.
ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ.
ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.