ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿ 18ಕ್ಕೂ ಹೆಚ್ಚು ಜನರು ಅಸ್ವಸ್ಥ | JANATA NEWS
ಬೀದರ್ : ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಇಂದು ನೀರಿನ ಬಾವಿಗೆ ಚರಂಡಿ ನೀರು ಮಿಶ್ರಣಗೊಂಡಿದೆ. ಇದೇ ನೀರನ್ನು ಜನರಿಗೆ ಕುಡಿಯಲು ಬಿಟ್ಟ ಕಾರಣ ಕುಡಿದಂತ 6 ಮಕ್ಕಳು ಸೇರಿದಂತೆ 18ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಂತ ಜನರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.
ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.