ನಾನೇ ಗೃಹಲಕ್ಷ್ಮಿ ಯೋಜನೆಯನ್ನ ಹೋಲ್ಡ್ ಮಾಡಿಸಿದ್ದೀನಿ, ಅರ್ಜಿ ತುಂಬಲು ಲಂಚ ಪಡೆಯುತ್ತಿದ್ದಾರೆ ಎಂಬ ದೂರು! | JANATA NEWS
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡದಂತೆ ನಾನೇ ತಡೆಹಿಡಿದಿದ್ದೇನೆ. ಕೆಲವೊಂದು ಬದಲಾವಣೆ ಆಗಬೇಕಿದೆ. ಆದರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದೇನೆ.
ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ಮಾಡಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಗಿ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ.
ಈ ಯೋಜನೆಗಳ ಅಡಿಯಲ್ಲಿ ಯಾರು ಕೂಡ ಇನ್ನೊಬ್ಬರಿಗೆ ಲಂಚ ಕೊಡಬಾರದು. ಲಂಚ ಕೊಟ್ಟರೆ ನಾವು ಒಂದು ಹೆಲ್ಪ್ಲೈನ್ ನಂಬರ್ ಕೊಡುತ್ತೇವೆ. ಅದಕ್ಕೆ ಕರೆ ಮಾಡಿ ಮಾಡಿ ದೂರು ಕೊಡಲಿ ಎಂದು ತಿಳಿಸಿದರು.