ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ? ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ! | JANATA NEWS
ಬೆಂಗಳೂರು : ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ.
ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು.
ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು. ಅಧಿಕಾರದಲ್ಲಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದವರು ಈಗ ಟೀಕೆ ಗಳನ್ನು ಮಾಡುತ್ತಿದ್ದಾರೆ.
15 ಲಕ್ಷ ರೂ.ಗಳನ್ನು ಪ್ರತಿ ಮನೆಗೆ ಕೊಡುತ್ತೇನೆ ಎಂದವರು 9 ವರ್ಷಗಳಾದರೂ ಈಡೇರಿಸಿಲ್ಲ. ಆದಾಯ ದುಪ್ಪಟ್ಟು ಮಾಡುತ್ತೇವೆ, ನಾ ಖಾವೂಂಗಾ, ನಾ ಖಾನೇದೂಂಗ ಎಂದವರು ಯಾರು? ಅಚ್ಛೇ ದಿನ್ ತಂದುಕೊಟ್ಟಿದ್ದಾರೆಯೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಐದು ಗ್ಯಾರಂಟಿ ಗಳನ್ನು ಈಡೇರಿಸದಿದ್ದರೆ ಅಧಿವೇಶನದಲ್ಲಿ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಅವರು ನೀಡಿದ್ದ ಪ್ರಣಾಳಿಕೆಯಲ್ಲಿ ಒಂದು ಲಕ್ಷ ದವರಿಗಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದರು.
ಹತ್ತು ಗಂಟೆ ವಿದ್ಯುತ್ ನೀಡುತ್ತೇವೆ, ನೀರಾವರಿಗೆ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದೆಲ್ಲಾ ಹೇಳಿದ್ದರು. ಆದರೆ ಅವುಗಳನ್ನು ಜಾರಿ ಮಾಡದವರು ಈಗ ಧರಣಿ ಕುಳಿತುಕೊಳ್ಳುವುದಾಗಿ ಹೇಳುತ್ತಾರೆ ಎಂದು ವ್ಯಂಗವಾಡಿದರು. ಈ ಮೂಲಕ ಅವರು ಜನಗಳಿಗೆ ತಪ್ಪು ಮಾಹಿತಿ ನೀಡುತ್ತಾರೆ ಎಂದರು.
ಜುಲೈ 1 ರಿಂದ ವಿದ್ಯುತ್ ಕೊಡುತ್ತಿದ್ದೇವೆ.ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೆವು, ಆದರೆ ಅಕ್ಕಿ ಸಿಗುತ್ತಿಲ್ಲ.ತೆಲಂಗಾಣ ದವರು ಭತ್ತ ಕೊಡುತ್ತೇವೆ, , ಛತ್ತೀಸಗಡದಿಂದ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ.ಪಂಜಾಬ್ ನವರು ನವೆಂಬರ್ ನಿಂದ ಕೊಡುತ್ತೇವೆ ಅಂತಾರೆ.ಹೀಗಾಗಿ NCCF ಕೇಂದ್ರಿಯ ಭಂಡಾರ, ನಫೆಡ್ ನಿಂದ ಕೊಟೆಷನ್ ಕೇಳಿದ್ದೇವೆ.ಅವರು ಕೊಟ್ಟ ಬಳಿಕ ದರ, ಗುಣಮಟ್ಟ, ಪ್ರಮಾಣ ವನ್ನ ನೋಡಿಕೊಂಡು ತೀರ್ಮಾನ ಮಡುತ್ತೇವೆ ಎಂದರು.
ಓಪನ್ ಮಾರ್ಕೆಟ್ ನಿಂದ ಖರೀದಿ ಮಾಡಬೇಕಾದರೆ, ಟೆಂಡರ್ ಕರೆಯಬೇಕಾಗುತ್ತೆ ಅದಕ್ಕೆ ಸಮಯ ಆಗುತ್ತದೆ. ರಾಗಿ, ಜೋಳ ಎರಡೆರಡು ಕೆ.ಜಿ. ಕೊಡಬಹುದು, ಆದರೆ ಇನ್ನು 3 ಕೆ.ಜಿ. ಅಕ್ಕಿ ಕೊಡಬೇಕಲ್ಲ, ಅದೇ ಸಮಸ್ಯೆ ಎಂದರು. ಹಾಲಿನ ದರ ಏರಿಕೆ ವಿಚಾರ ಸಂಬಂಧಿಸಿ ಚರ್ಚೆ ಮಾಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಹೇಳಿದರು.