ಲಾರಿ, ಆಟೋಗಳ ನಡುವೆ ಭೀಕರ ಅಪಘಾತ, ಏಳು ಸಾವು! | JANATA NEWS
ವಿಜಯನಗರ : ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಿಂದ ಎರಡು ಆಟೋದಲ್ಲಿ 19 ಜನರು ತುಂಗಭದ್ರಾ ಡ್ಯಾಮ್ಗೆ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಮೃತರೆಲ್ಲರು ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತಪಟ್ಟ ಪೈಕಿ ಇಬ್ಬರು ಹೆಸರು ಪತ್ತೆಯಾಗಿದ್ದು, ಉಮೇಶ್ ಮತ್ತು ಆಟೋ ಚಾಲಕ ಶ್ಯಾಮಾ ಎಂದು ಗುರುತಿಸಲಾಗಿದೆ. ಉಳಿದವರ ಹೆಸರು ಇನ್ನಷ್ಟೇ ತಿಳಿಯಬೇಕಿದೆ.
ಬಳ್ಳಾರಿಯಿಂದ ತುಂಗಭದ್ರಾ ಅಣೆಕಟ್ಟು ವೀಕ್ಷಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಎರಡು ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಸ್ತಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.