ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕೊಟ್ಟ ಆಶ್ವಾಸನೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಹೋರಾಟ ಮಾಡಲಿದೆ | JANATA NEWS
ಬೆಂಗಳೂರು : ಬಿಜೆಪಿಯಲ್ಲಿ ಬಹಿರಂಗ ಹೇಳಿಕೆ ಕೊಡುವ ಪ್ರಶ್ನೆ ಇಲ್ಲ. ನಮ್ಮ ಪಕ್ಷದಲ್ಲಿ ಇನ್ನು ಮುಂದೆ ಅಶಿಸ್ತು ಇರುವುದಿಲ್ಲ ಎಂಬ ವಿಶ್ವಾಸ ನಮಗೆಲ್ಲರಿಗೂ ಇದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಬಾಂಬೆ ಬಾಯ್ಸ್ ವಿಚಾರ ನಾನು ಪ್ರಸ್ತಾಪ ಮಾಡಿಲ್ಲ. ಬಿಜೆಪಿಯಲ್ಲಿ ತುಂಬ ಅಶಿಸ್ತಿದೆ, ಕಾಂಗ್ರೆಸ್- ಜೆಡಿಎಸ್ನಿಂದ ನಮ್ಮ ಪಕ್ಷಕ್ಕೆ ಬಂದ ಶಾಸಕರಿಂದ ಅಶಿಸ್ತು ಆಗಿಲ್ಲ. ಅವರಿಂದ ಸರಕಾರ ಅಧಿಕಾರಕ್ಕೆ ಬಂದಿದೆ. ಅವರ ಬಗ್ಗೆ ಒಂದೇ ಒಂದು ಆಪಾದನೆ ಮಾಡಿಲ್ಲ. ಅವರು ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ಕಳೆದ ಬಾರಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ಸಿಗೆ ಕೇವಲ ಒಂದು ಸ್ಥಾನ ಮಾತ್ರ ಸಿಕ್ಕಿತ್ತು ಎಂದು ತಿಳಿಸಿದರು. ಅಲ್ಲೊಬ್ಬರು, ಇಲ್ಲೊಬ್ಬರು ಪಕ್ಷದ ನಾಯಕರ ವಿರುದ್ಧ ಮಾತನಾಡುವುದು ಮತ್ತು ಆಪಾದನೆ ಮಾಡುವುದು ಸೂಕ್ತವಲ್ಲ ಎಂದು ಮುಖಂಡರು ಸೂಚಿಸಿದ್ದಾರೆ. ಬಿಜೆಪಿಯಲ್ಲಿ ಬಹಿರಂಗ ಹೇಳಿಕೆ ಕೊಡುವ ಪ್ರಶ್ನೆ ಇಲ್ಲ. ನಮ್ಮ ಪಕ್ಷದಲ್ಲಿ ಇನ್ನು ಮುಂದೆ ಅಶಿಸ್ತು ಇರುವುದಿಲ್ಲ ಎಂಬ ವಿಶ್ವಾಸ ನಮಗೆಲ್ಲರಿಗೂ ಇದೆ ಎಂದರು.
ಗ್ಯಾರಂಟಿಗಳನ್ನು ಕೊಟ್ಟು ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಿದೆ. ಅವರು ಇದೀಗ ವಿದ್ಯುತ್ ದರ ಏರಿಸಿ ಬರೆ ಎಳೆದಿದ್ದಾರೆ. 200 ಯೂನಿಟ್ ವಿದ್ಯುತ್ ಉಚಿತ ಎಂದಿದ್ದರು. ವಿದ್ಯುತ್ ದರ ಏರಿಕೆ, ದಿನ ಬಳಕೆ ವಸ್ತುಗಳ ದರ ಏರಿಕೆಯಿಂದ ಜನಜೀವನ ಕಷ್ಟವಾಗಿದೆ. ನಿರುದ್ಯೋಗ ಭತ್ಯೆ, ಗೃಹಿಣಿಗೆ 2 ಸಾವಿರ ಕೊಡುವುದಾಗಿ ಹೇಳಿದ್ದು, ಅದು ಜಾರಿ ಆಗಿಲ್ಲ.
ಅಕ್ಕಿ ವಿಚಾರದಲ್ಲಿ ಕೇಂದ್ರವನ್ನು ಎಳೆದು ತಂದದ್ದು ಸರಿಯಲ್ಲ. 10 ಕೆಜಿ ಅಕ್ಕಿ ಕೊಡಲಾಗದುದಕ್ಕೆ ಹಣ ಕೊಡಲು ಕೇಳಿದ್ದೆವು. ಈಗ 5 ಕೆಜಿಗೆ 170 ರೂ. ಕೊಡುವುದಾಗಿ ಹೇಳಿದ್ದಾರೆ. ಕೇಂದ್ರದ 5 ಕೆಜಿಗೂ ನಿಮಗೂ ಸಂಬಂಧ ಇಲ್ಲ. ಆದ್ದರಿಂದ ಮಾರುಕಟ್ಟೆ ದರದಂತೆ ಪ್ರತಿ ಮನೆಯ ಪ್ರತಿ ವ್ಯಕ್ತಿಗೂ 10 ಕೆಜಿ ಅಕ್ಕಿಗೆ ಹಣ ಕೊಡಿ ಎಂದು ಆಗ್ರಹಿಸಿದ ಅವರು, ಈ ವಿಚಾರದಲ್ಲೂ ಟೋಪಿ ಹಾಕದಿರಿ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕೊಟ್ಟ ಆಶ್ವಾಸನೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಹೋರಾಟ ಮಾಡಲಿದೆ. ವಿಧಾನ ಮಂಡಲದ ಒಳಗೆ ನಮ್ಮ ಪಕ್ಷದ ಶಾಸಕರು, ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.