ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ | JANATA NEWS
ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ತಿಂಗಳೇ 5 ಕೆಜಿ ಅಕ್ಕಿ ಬದಲಿಗೆ ಹಣ ಕೊಡುತ್ತೇವೆ. ಬಹುಶಃ ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಈ ತಿಂಗಳಿಂದಲೇ ಜಾರಿ ಆಗಲಿದೆ. 10ನೇ ತಾರೀಖಿನಿಂದ ಅಕ್ಕಿ ಕೊಡಲು ಪ್ರಾರಂಭ ಮಾಡುತ್ತೇವೆ. ಗೃಹ ಜ್ಯೋತಿ ಯೋಜನೆಯೂ ಈ ತಿಂಗಳಿಂದಲೇ ಜಾರಿ ಆಗಲಿದೆ. ಜುಲೈ ತಿಂಗಳ ಬಿಲ್ ಆಗಸ್ಟ್ಗೆ ಬರುತ್ತೆ.
ಜುಲೈ ತಿಂಗಳಲ್ಲಿ ಅಕ್ಕಿ ಬದಲು ಹಣ ಕೊಡುತ್ತೇವೆ ಅಂತ ಹೇಳಿದ್ದೆವು. ಆದರೆ ಜುಲೈ 1 ರಂದೇ ಹಣ ಕೊಡುತ್ತೇವೆ ಅಂತ ಹೇಳಿಲ್ಲ. ಜುಲೈ 10 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರು ಮಾಡ್ತೀವಿ. ಗೃಹ ಜ್ಯೋತಿ ಯೋಜನೆ ಈ ತಿಂಗಳಿಂದ ಉಚಿತ, ಗೃಹ ಜ್ಯೋತಿ ಯೋಜನೆಯಲ್ಲಿ ಆಗಸ್ಟ್ ನ ಬಿಲ್ ಉಚಿತ ಎಂದು ತಿಳಿಸಿದರು.