ಪ್ರೀತ್ಸೆ ಅಂತ ಪೀಡಿಸ್ತಿದ್ದ ಯುವಕ, ಬೇಸತ್ತು ಪ್ರಾಣ ಬಿಟ್ಟ ಯುವತಿ | JANATA NEWS
ಮೈಸೂರು : ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.
ಹರ್ಷಿತಾ(21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು( 26) ಕಿರುಕುಳ ನೀಡುತ್ತಿದ್ದನು. ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ ಆದರೆ ಹರ್ಷಿತಾ ತಿರಸ್ಕರಿಸುತ್ತಿದ್ದಳು.
ಈ ಮಧ್ಯೆ ಹರ್ಷಿತಾ ಮನೆಯವರು ಮದುವೆ ಸಂಬಂಧ ನೋಡಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಇದನ್ನು ತಿಳಿದ ತನ್ನನ್ನು ಮದುವೆಯಾಗುವಂತೆ ಇನ್ನಷ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದ.
ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳಿಗಾಗಿ ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಹರ್ಷಿತಾಳನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹರ್ಷಿತಾ ಮೃತಪಟ್ಟಿದ್ದಾಳೆ.