ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ | JANATA NEWS
ರಾಮನಗರ : ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದದರು.
ಸ್ಯಾಂಡಲ್ವುಡ್ ನೈಟ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ ಅವರು, ಚಾಮುಂಡೇಶ್ವರಿ ಆಶೀರ್ವಾದ ಪಡೆದು ಬಂದಿದ್ದೇನೆ. ತಾಯಿ ಆಶೀರ್ವಾದ ಹಾಗೂ ಜಿಲ್ಲೆಯ ಜನತೆಯ ಶಕ್ತಿಯಿಂದ ನಮ್ಮ ಸರ್ಕಾರ ಬಂದಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು
ಸರ್ಕಾರ ಕೊಟ್ಟ ಐದು ಗ್ಯಾರಂಟಿಗಳನ್ನ ಈಡೇರಿಸುವ ಕೆಲಸ ಮಾಡ್ತಿದ್ದೇವೆ. ಮುಂದಿನ ತಿಂಗಳು ನೀವ್ಯಾರು ಕರೆಂಟ್ ಬಿಲ್ ಕಟ್ಟಂಗಿಲ್ಲ. ಗೃಹಜ್ಯೋತಿಯಲ್ಲಿ ನೊಂದಣಿ ಮಾಡಿಕೊಂಡವ್ರಿಗೆ ಉಚಿತ ವಿದ್ಯುತ್ ಎಂದರು.
ಈಗಾಗಲೇ ಜನ ಉಚಿತ ಬಸ್ ಯೋಜನೆ ಪಡೆದುಕೊಳ್ತಿದ್ದಾರೆ. ಹಾಗೆಯೇ ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಕೆಶಿ ಹೇಳಿದರು. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.
ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತಕೇಳಲು ಬರಲ್ಲ. ಎಲ್ಲಾ ಭರವಸೆ ಈಡೇರಿಸುತ್ತೇವೆ. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ. ರಾಮನಗರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ ಮಾಡ್ತೇನೆ ಎಂದು ಡಿಕೆಶಿ ಹೇಳಿದರು.