ಯುವತಿ ನೇಣಿಗೆ ಶರಣು, ಫೋಟೋ ವೈರಲ್ ಮಾಡೋದಾಗಿ ಬೆದರಿಸಿದ್ದ ಪ್ರಿಯಕರ | JANATA NEWS
ಬೆಂಗಳೂರು : ಯುವತಿ ನೇಣಿಗೆ ಶರಣಾಗಿರೋ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.
ಆಶಾ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವರಾಗಿದ್ದು, ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ವಾಸವಾಗಿದ್ದರು.
ಈಕೆ ಕಳೆದ ಐದು ವರ್ಷಗಳಿಂದ ಅವಿನಾಶ್ ಎಂಬಾತನನ್ನ ಪ್ರೀತಿಸುತ್ತಿದ್ದಳಂತೆ. ಮಂತ್ರಿ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದ ಆಶಾ ತನ್ನ ಪ್ರಿಯಕರ ಅವಿನಾಶ್ ಜೊತೆಗೆ ಪಾರ್ಕ್, ಸಿನಿಮಾಗಳಿಗೆ ಸುತ್ತಾಡುತ್ತಿದ್ದಳು ಎನ್ನಲಾಗಿದೆ. ಪ್ರೀತಿಯ ವಿಷಯವನ್ನು ಮನೆಯವರಿಗೂ ತಿಳಿಸಿದ್ದಳು ಎಂದು ತಿಳಿದುಬಂದಿದೆ.
ಪ್ರೀತಿಗೆ ಹೆತ್ತವರು ನಿರಾಕರಿಸಿದ್ದರಿಂದ ಸಂಬಂಧ ಮುರಿದುಕೊಳ್ಳೋ ನಿರ್ಧಾರಕ್ಕೆ ಬಂದಿದ್ದಳಂತೆ. ಆಶಾ ತನ್ನ ಪ್ರಿಯಕರನಿಗೆ ಮನೆಯವರ ವಿರೋಧದ ವಿಷಯ ತಿಳಿಸಿದ್ದಳು. ಇದರಿಂದ ರೊಚ್ಚಿಗೆದ್ದ ಅವಿನಾಶ್, ‘ನೀನು ನನಗೆ ಮೋಸ ಮಾಡ್ತಿದ್ದೀಯಾ. ಇದೆಲ್ಲ ಪ್ರೀತಿ ಮಾಡೋಕು ಮುಂಚೆನೇ ಯೋಚನೆ ಮಾಡಬೇಕಿತ್ತು. ನೀನು ನನ್ನನ್ನು ಬಿಟ್ಟು ಹೋಗಬೇಡ. ಒಂದು ವೇಳೆ ಬಿಟ್ಟು ಹೋದರೆ ನಾನು ನಮ್ಮಿಬ್ಬರ ಫೋಟೋ ವೈರಲ್ ಮಾಡುತ್ತೇನೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ಆಶಾ ಬೇಸರವಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಿನಾಶ್ನನ್ನು ವಿಚಾರಣೆಗೆ ಒಳಪಡಿಸಿದ್ದಾಳೆ.