Sun,Apr28,2024
ಕನ್ನಡ / English

ಕಳೆನಾಶಕ ಸಿಂಪಡಿಸುವಾಗ ದೇಹದೊಳಗೆ ಸೇರಿ ಉಪವಲಯ ಅರಣ್ಯಾಧಿಕಾರಿ ಅನುಮಾನಾಸ್ಪದವಾಗಿ ಸಾವು

08 Jul 2023
2208

ಕುಮಟಾ : ಗಿಡಗಳಿಗೆ ಕಳೆನಾಶಕ ಸಿಂಪಡಿಸಿದ ನಂತರ ದೇಹದೊಳಗೆ ಅಪಾಯಕಾರಿ ವಿಷ ಸೇರಿದ ಪರಿಣಾಮವಾಗಿ ಕರ್ತವ್ಯ ನಿರತ ಅರಣ್ಯಾಧಿಕಾರಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ವಿಚಿತ್ರ ಘಟನೆ ವರದಿಯಾಗಿದೆ.

ದಾಂಡೇಲಿ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಮೃತ ದುರ್ದೈವಿ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆನಾಶಕ ಸಿಂಪಡಿಸುವ ವಿಧಾನದ ಬಗ್ಗೆ ಸಾಕಷ್ಟು ಅನುಭವ ಹೊಂದಿದ್ದ ಅಧಿಕಾರಿಯೊಬ್ಬರ ಸಾವು ಹಲವಾರು ಸಂಶಯಕ್ಕೆ ಕಾರಣವಾಗಿದೆ, ಎನ್ನಲಾಗಿದೆ.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಾಡ ಗ್ರಾಮದವರಾದ ಯೋಗೇಶ್ ನಾಯ್ಕ ಅವರು ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ವಿಷಪೂರಿತ ಕೀಟ ನಾಶಕವನ್ನು ಸಹೋದ್ಯೋಗಿಗಳ ಜೊತೆ ಯೋಗೇಶ ಸಹ ಸಿಂಪಡಿಸಿದ್ದರು, ಎನ್ನಲಾಗಿದೆ.

ಕೀಟನಾಶಕ ಸಿಂಪಡಿಸಿದ ನಂತರ ಯೋಗೇಶ್ ನಾಯ್ಕ ಅವರು ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ, ಎನ್ನಲಾಗಿದೆ. ಮರುದಿನ ಯೋಗೇಶ್ ನಾಯ್ಕ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಅನಾರೋಗ್ಯ ಉಲ್ಬಣಗೊಳ್ಳುತ್ತಿದ್ದಂತೆಯೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಯೋಗೇಶ್ ನಾಯ್ಕ ಅವರನ್ನು ದಾಖಲಿಸಲಾಗಿದೆ.

ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೆಂಡತಿ ಹಾಗು ಎರಡುವರೆ ವರ್ಷದ ಪುಟ್ಟ ಮಗ ನನ್ನ ಅಗಲಿದ್ದಾರೆ. ಯೋಗೇಶ್ ನಾಯ್ಕ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ನಿನ್ನೆ ಸಂಜೆಯೆ ಮೃತಪಟ್ಟಿದ್ದ ಯೋಗೇಶ್ ನಾಯ್ಕ ಅವರ ಮೃತದೇಹವನ್ನು ಇಂದು ಶನಿವಾರ ಹುಬ್ಬಳ್ಳಿಯಿಂದ ಬೆಳಿಗ್ಗೆ 7 ಗಂಟೆಗೆ ಹಳಿಯಾಳದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಾರ್ಯಾಲಯದ ಆವರಣಕ್ಕೆ ತರಲಾಯಿತು.

ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ಹಳಿಯಾಳ ಪಟ್ಟಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

RELATED TOPICS:
English summary :Sub-Divisional forest officer suspiciously died after getting inside his body while spraying herbicide

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...