Fri,May10,2024
ಕನ್ನಡ / English

ಟೊಮೆಟೋ ಬೆಲೆ ಶತಕ, ಟೊಮೆಟೊ ತುಂಬಿದ್ದ ವಾಹನ ಕಳವು | JANATA NEWS

10 Jul 2023
1661

ಬೆಂಗಳೂರು : ಬೆಲೆಯಂತೂ ಪೆಟ್ರೋಲ್​​ ದರಕ್ಕಿಂತಲೂ ದುಬಾರಿಯಾಗಿದೆ ಟೊಮೆಟೊ. ಬೆಂಗಳೂರಿನಲ್ಲಿ ಟೊಮೆಟೋ ತುಂಬಿದ್ದಂತ ರೈತರೊಬ್ಬರ ವಾಹನವನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.

ಪ್ರತಿ ಕೇಜಿಗೆ 110 ರೂ. ಆಗಿದೆ. ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೋ ವಾಹನವನ್ನೇ ಖದೀಮರು ಕದ್ದಿದ್ದಾರೆ.

ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜುಲೈ.8ರಂದು ಹಿರಿಯೂರಿನಿಂದ ರೈತನೊಬ್ಬ ಕೋಲಾರಕ್ಕೆ ಟೊಮೆಟೋವನ್ನು ಬುಲೆರೋ ವಾಹನದಲ್ಲಿ ತುಂಬಿಕೊಂಡು ಬಂದಿದ್ದನು. ಈ ವಾಹನವನ್ನು ಹಿಂಬಾಲಿಸಿ ಕಾರಿನಲ್ಲಿ ಬಂದಿದ್ದಂತ ಮೂವರು, ಬುಲೆರೋ ವಾಹನ ಡಿಕ್ಕಿಯಾಗಿದೆ, ನಿಲ್ಲಿಸುವಂತೆ ಆರ್ ಎಂ ಸಿ ಯಾರ್ಡ್ ಬಳಿಯಲ್ಲಿ ತಡೆದು ನಿಲ್ಲಿಸಿದ್ದಾರೆ.

ನಿಮ್ಮ ವಾಹನ ನಮ್ಮ ಕಾರಿಗೆ ಡಿಕ್ಕಿಯಾಗಿದೆ. ಇದಕ್ಕೆ ಪರಿಹಾರವಾಗಿ ಹಣ ಕೊಡುವಂತೆ ಡ್ರೈವರ್, ರೈತನಿಗೆ ಅವಾಜ್ ಹಾಕಿದ್ದಾರೆ. ಅವರ ನಾಟಕದಿಂದ ಭಯಗೊಂಡಂತ ಇಬ್ಬರು ನಮ್ಮ ಬಳಿ ಹಣವಿಲ್ಲ ಎಂದಾಗ ಆನ್ ಲೈನ್ ನಲ್ಲಿ ಹಾಕುವಂತೆ ಹೇಳಿದ್ದಾರೆ.

ಹಣ ಇಲ್ಲ ಎಂದಾಗ ಮೊಬೈಲ್​ನಲ್ಲಿದ್ದ ಹಣ ಟ್ರಾನ್ಸಫರ್ ಮಾಡಿ ಎಂದು ಹಣ ದೋಚಿದ್ದಾರೆ. ನಂತರ ಬೊಲೊರೋದಲ್ಲಿದ್ದ ಟೊಮೆಟೊ ನೋಡಿದ್ದಾರೆ. ನಂತರ ಬೊಲೊರೋ ಸಮೇತ ರೈತ ಮತ್ತು ಡ್ರೈವರ್​​ನನ್ನು ಕರೆದುಕೊಂಡು ಚಿಕ್ಕಜಾಲ ತನಕ ಹೋಗಿದ್ದಾರೆ. ಚಿಕ್ಕಜಾಲ ಬಳಿ ರೈತನನ್ನು ಬಿಟ್ಟು ಡ್ರೈವರ್​ ಮತ್ತು ಟೊಮೆಟೊ ತುಂಬಿದ್ದ ವಾಹನ ಸಮೇತ ಎಸ್ಕೇಪ್ ಆಗಿದ್ದಾರೆ.

ಸದ್ಯ ಘಟನೆ ಸಂಬಂಧ ಆರ್​​ಎಮ್​​ಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The price of tomatoes is hundred, the vehicle full of tomatoes was stolen

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...