ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ | JANATA NEWS
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು.
ಬೆಳಗಾವಿಯಲ್ಲಿ ಜೈನ ಮುನಿ ಹತ್ಯೆ ಪ್ರಕರಣದ ವಿಚಾರವಾಗಿ ಮಾತನಾಡಿದ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಇದು ಕರ್ನಾಟಕಕ್ಕೆ ಕಳಂಕ ತರುವ ಸಂಗತಿ. ಮುನಿಗಳಿಗೆ ಸಂತರಿಗೆ ರಕ್ಷಣೆ ಇಲ್ಲದಿದ್ದರೆ ಹೇಗೆ? ಹಣಕಾಸು ವ್ಯವಹಾರ ಎಂಬುವುದು ಒತ್ತಡದಿಂದ ಪೊಲೀಸರು ಸೃಷ್ಟಿ ಮಾಡಿದ್ದಾರೆ.ಈಗ ಭಯದ ವಾತಾವರಣ ರಾಜ್ಯದಲ್ಲಿ ನಿರ್ಮಾಣ ಆಗಿದೆ.
ಈ ಸರ್ಕಾರ ಬಂದ ಬಳಿಕ ಎಲ್ಲೆಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ ಎಂದು ಆರೋಪಿಸಿದರು.
ಎಲ್ಲವನ್ನೂ ತ್ಯಾಗ ಮಾಡಿದ ಮುನಿಗಳ ಹತ್ಯೆಯಾಗಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ, ಕರ್ನಾಟಕ ರಾಜ್ಯಕ್ಕೆ ಹತ್ಯೆ ಕಳಂಕವಾಗಿದೆ. ಈ ಹತ್ಯೆ ಹಿಂದೆ ಹಲವು ಅನುಮಾನಗಳಿವೆ. ಬೆಂಗಳೂರಿನಿಂದ ಪೊಲೀಸ್ ಮೇಲೆ ಏನು ಒತ್ತಡ ಬಂದಿದೇಯೋ? ಪೊಲೀಸ್ ಮೇಲೆ ಒತ್ತಡ ಬರುತ್ತೆ. ಜೈನ ಮುನಿಗಳು ಎಲ್ಲವನ್ನೂ ತ್ಯಾಗ ಮಾಡ್ತಾರೆ
ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಟಿ. ನರಸಿಪುರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಆಗಿದೆ, ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಡುತ್ತಿವೆ ಅಂದ ಯತ್ನಾಳ ಮಾತಿಗೆ ಮಾತಿಗೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಸಿದರು.
ಈ ಸರ್ಕಾರದ ಮೇಲೆ ವಿಶ್ವಾಸ ಇಲ್ಲ,ಇದನ್ನು ಸಿಬಿಐಗೆ ನೀಡಬೇಕು. ಒಂದು ಕೋಮಿವಿನ ತೃಪ್ತಿ ಪಡಿಸುವ ಕೆಲಸ ಆಗುತ್ತಿದೆ, ಒಂದು ಸಂತಾಪ ಕೂಡ ಸದನದಲ್ಲಿ ಆಗಲಿಲ್ಲ. ಬೇರೆ ಯಾರಾದರೂ ಸತ್ತಿದ್ರೆ ಸಂತಾಪ ಆಗ್ತಿತ್ತು ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು..
ಹತ್ಯೆ ಆರೋಪಿ ಒರ್ವನ ಹೆಸರು ಮಾತ್ರ ಬಹಿರಂಗವಾಗಿ ಹೇಳಿದ್ದಾರೆ ಪೊಲೀಸರು. ಮತ್ತೋರ್ವನ ಹೆಸರನ್ನು ಬಹಿರಂಗವಾಗಿ ಹೇಳಿಲ್ಲ. ಇದು ಸಂಶಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.