ಡಿಸಿ, ಕಮಿಷನರ್, ಸಿಇಒಗಳಿಗೆ ರೇಟ್ ಫಿಕ್ಸ್: ಸರ್ಕಾರದ ವಿರುದ್ಧ ಕಟೀಲ್ ಗಂಭೀರ ಆರೋಪ | JANATA NEWS
ಬೆಳಗಾವಿ : ಜಿಲ್ಲಾಧಿಕಾರಿಗಳು, ಆಯುಕ್ತರು, ಸಿಇಒ, ಎಂಜಿನರ್ ಗಳಿಗೆ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದರು.
ಬೆಳಗಾವಿ ಪೊಲೀಸ್ ಕಮಿಷನರ್ ನೇಮಕವಾಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಗಳಿಗೆ, ಸಿಇಓಗಳಿಗೆ, ಕಮಿಷನರ್ ಗಳಿಗೆ ರೇಟ್ ಫಿಕ್ಸ್ ಆಗಿದೆ. ರೇಟ್ ಕುದುರುವವರೆಗೂ ಯಾರು ನೇಮಕ ಆಗಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದ ಶಾಂತಿ ಸುವ್ಯವಸ್ಥೆ ಕಾಪಾಡುವ ಬದಲು ವರ್ಗಾವಣೆಯಲ್ಲಿ ತೊಡಗಿದೆ. ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿಲ್ಲ. ಒಂದು ವರ್ಷದಲ್ಲಿ ಎಲ್ಲವನ್ನೂ ದೋಚಲು ಮುಂದಾಗಿದೆ. ಕಾಂಗ್ರೆಸ್ ನ ತಲೆಯಲ್ಲಿ ಮದ, ಮತ್ಸರ, ಅಹಂಕಾರ ಇದೆ. ಜನ ಮತ್ತೆ ಕಾಂಗ್ರೆಸ್ ಗೆ ಬುದ್ದಿ ಕಲಿಸಲಿದ್ದಾರೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯದ ಜನರಿಗೆ ತೊಂದರೆಯಾದರೆ ನಮ್ಮ ಹೋರಾಟ ನಿರಂತರವಾಗಿ ಇರಲಿದೆ ಎಂದು ಹೇಳಿದರು.
ಜನರ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಲೋಕಸಭೆ ಚುನಾವಣೆ ಈ ರೀತಿ ಮಾಡ್ತಿದ್ದು, 5 ವರ್ಷ ಸರ್ಕಾರ ನಡೆಸುತ್ತೇವೆ ಅಂತಾ ವಿಶ್ವಾಸವಿಲ್ಲ, ಈಗಲೇ ತುಂಬಿಕೊಳ್ಳುವ ವ್ಯವಸ್ಥೆ ಮಾಡುತ್ತಿದ್ದಾರೆ.
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ, ಪಾಕಿಸ್ತಾನ ಧ್ವಜ ಹಿಡಿದು ಕುಣಿದಾಡಿದಾಗ ಕೇಸು ಏಕೆ ದಾಖಲಿಸಲಿಲ್ಲ. ಅವರಿಗೆ ಕಾಂಗ್ರೆಸ್ ಬೆಂಗಾವಲಾಗಿದೆಯೇ? ರಾಷ್ಟ್ರ ಪ್ರೇಮಿಗಳ ಪರವಾವಿ ದೂರು ದಾಖಲಿಸುತ್ತಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಗೂಂಡಾಗಿರಿ, ದರೋಡೆ, ಹಿಂದೂಗಳ ಹತ್ಯೆ, ಮಂಗಳೂರಿನ ಜೈಲಿನಲ್ಲಿ ಡಬಲ್ ಮರ್ಡರ್, ಮೈಸೂರಿನಲ್ಲಿ ಜೈಲಿನಲ್ಲಿ ಕೊಲೆ, ಹೀಗೆ ವಿವಿಧ ಪ್ರಕರಣಗಳು ನಡೆದಿವೆ. ಹೀಗೆ ನಿರಂತರ ಕೊಲೆ, ಸುಲಿಗೆ ನಡೆಯುತ್ತವೆ. ಹಿಂದೆ ಅವರ ಸರ್ಕಾರ ಇದ್ದಾಗ 24ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗಾಗ್ಗೆ ಇಂತಹ ಪ್ರಕರಣ ರಾರಾಜಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ಜೈನಮುನಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ನಡೆಯಬೇಕು. ತಪ್ಪಿತಸ್ಥಿಗೆ ಕಠಿಣ ಶಿಕ್ಷೆ ಆಗಬೇಕು. ಬಿಜೆಪಿಯ ಸತ್ಯಶೋಧನ ಸಮಿತಿಯಿಂದ ಜನರಿಂದ ಮಾಹಿತಿ ಪಡೆದುಕೊಂಡು ಅಧ್ಯಯನ ನಡೆಸಲಾಗುವುದು ಎಂದರು.