ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿಶೀಟರ್ ಹತ್ಯೆ | JANATA NEWS
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ವೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಕಪಿಲ್ ಎಂದು ಗುರುತಿಸಲಾಗಿದೆ. ಸ್ನೇಹಿತನನ್ನು ನೋಡಲು ಕಪಿಲ್ ಹೊರಟಿದ್ದನು, ಈ ವೇಳೆ ಎರಡು ಬೈಕ್ಗಳಲ್ಲಿ ಹೆಲ್ಮೆಟ್ ಹಾಗೂ ಪುಲ್ ಓವರ್ ಧರಿಸಿ ದುಷ್ಕರ್ಮಿಗಳು ಬಂದು ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ದಾಳಿ ಮಾಡಿದ್ದಾರೆ.
ಡಿ.ಜೆ. ಹಳ್ಳಿ, ಕೆ ಎಚ್ ಬಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ದಾಳಿ ಬಳಿಕ ಕಪಿಲ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕೂಡಲೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಪಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
2014ರಲ್ಲಿ ನಕ್ರ ಬಾಬುವಿನ ಕೊಲೆ ಪ್ರಕರಣದಲ್ಲಿ ಕಪಿಲ್ ಆರೋಪಿಯಾಗಿದ್ದನು.