Fri,May03,2024
ಕನ್ನಡ / English

ಗರ್ಭಿಣಿ ಪತ್ನಿಯನ್ನ ಅಪಘಾತದಿಂದ ಹತ್ಯೆ ಮಾಡಲು ಸಂಚು, 6 ತಿಂಗಳ ಬಳಿಕ ಆರೋಪಿಗಳು ಸೆರೆ | JANATA NEWS

16 Jul 2023
958

ಬೆಂಗಳೂರು : ಗರ್ಭಿಣಿ ಪತ್ನಿಯನ್ನ ಅಪಘಾತದಿಂದ ಹತ್ಯೆ ಮಾಡಲು ಸಂಚು ರೂಪಿಸಿ 6 ತಿಂಗಳ ಬಳಿಕ ಆರೋಪಿಗಳು ಸೆರೆಸಿಕ್ಕ ಘಟನೆ ನಡೆದಿದೆ.

ಅರವಿಂದ ಹಾಗೂ ಉದಯ್ ಕುಮಾರ್ ಬಂಧಿತರು. ಹೊಸ ವರ್ಷದ ದಿನದಂದೇ ಬಾಗಲೂರಿನ ಕೆಐಡಿಬಿ ಲೇಔಟ್​​ನಲ್ಲಿ ದ್ವಿಚಕ್ರ ವಾಹನದಲ್ಲಿ‌ ಬರುತ್ತಿದ್ದ ಚೈತನ್ಯ ಎಂಬಾಕೆಗೆ ಅಪಘಾತವೆಸಗಿದ್ದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆಕೆಯ ಪತಿ ಅರವಿಂದ್ ಹಾಗೂ ಆತನ ಸಹಚರ ಉದಯ್ ಕುಮಾರ್ ಬಂದಿಸಿದ್ದರೆ.

ಅರವಿಂದ್ ಪತ್ನಿಯ ಕೊಲೆಗೆ ಸಿನಿಮೀಯ ರೀತಿಯಲ್ಲಿ ಸಂಚು ರೂಪಿಸಿದ್ದನು. ಆದ್ರೆ ಪತ್ನಿ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಒಂದೂವರೆ ವರ್ಷದ ಹಿಂದೆ ಚೈತನ್ಯಾ ಎಂಬವನ್ನು ಅರವಿಂದ್ ಮದುವೆಯಾಗಿದ್ದನು. ಮದುವೆ ಬಳಿಕ ಅತ್ತೆ-ಮಾವನನ್ನು ಬಿಟ್ಟು ಪ್ರತ್ಯೇಕವಾಗಿ ವಾಸವಾಗಿರೋಣ ಎಂದು ಪತಿಯ ಮೇಲೆ ಒತ್ತಡ ಹಾಕಿದ್ದರು.

ತದನಂತರ ತನ್ನ ತಂದೆ ತಾಯಿಯನ್ನು ಪತ್ನಿ ಚೈತನ್ಯ ಅವರೇ ತನ್ನಿಂದ ದೂರ ಮಾಡಿದರು ಎಂದು ಅರವಿಂದ್ ಕೋಪಗೊಂಡಿದ್ದ. ಇದೇ ಕೋಪದಿಂದ ಒಂದೂವರೆ ವರ್ಷಕ್ಕೆ ವಿಚ್ಛೇದನ ಕೊಡುವಂತೆ ಪತ್ನಿಯನ್ನು ಪೀಡಿಸಲಾರಂಭಿಸಿದ್ದ. ಆದರೆ ವಿಚ್ಛೇದನ ನೀಡಲು ಚೈತನ್ಯ ಒಪ್ಪಿರಲಿಲ್ಲ. ಹಾಗಾಗಿ ಆಕೆಯನ್ನು ಕೊಲೆ ಮಾಡಲು ಅರವಿಂದ್ ನಿರ್ಧರಿಸಿದ್ದ.

ಅದಕ್ಕಾಗಿ ಹಳೆಯದೊಂದು ಟಾಟಾ ಸುಮೋ ಖರೀದಿಸಿ, ಅದಕ್ಕೊಬ್ಬ ಚಾಲಕನನ್ನೂ ನೇಮಿಸಿದ್ದ. ಉದಯಕುಮಾರ್ ಎಂಬ ಆ ಚಾಲಕನಿಗೆ ಅಪಘಾತವಾದ ರೀತಿಯಲ್ಲಿ ಪತ್ನಿಯನ್ನು ಕೊಲೆ ಮಾಡಿಸುವಂತೆ ಹೇಳಿದ್ದ.

ಅರವಿಂದ್ ಸೂಚನೆಯಂತೆ ಉದಯ್​ಕುಮಾರ್ ಸಿಸಿಟಿವಿ ಇರದಂಥ ಜಾಗವೊಂದನ್ನು ಗುರುತಿಸಿ ಅಲ್ಲಿ ಚೈತನ್ಯಳನ್ನು ಆಯಕ್ಸಿಡೆಂಟ್ ಮಾದರಿಯಲ್ಲಿ ಕೊಲೆ ಮಾಡಲು ಯತ್ನಿಸುತ್ತಾನೆ. ಏಳು ತಿಂಗಳ ಹಿಂದೆ ಭರತನಾಟ್ಯ ಕ್ಲಾಸ್ ಮುಗಿಸಿಕೊಂಡು ಚೈತನ್ಯಾ ಮನೆಗೆ ಹಿಂದಿರುಗುತ್ತಿರುವಾಗ ಕಾರ್​ನಲ್ಲಿ ಬಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆದರೆ ಆಕೆ ಸಣ್ಣಪುಟ್ಟ ಗಾಯಗಳಿಂದಾಗಿ ಬದುಕುಳಿಯುತ್ತಾಳೆ. ಡಿಕ್ಕಿ ಹೊಡೆದ ಬಳಿಕ ಉದಯ್ ಮತ್ತು ಅರವಿಂದ್ ಎಸ್ಕೇಪ್ ಆಗಿದ್ದರು.

ಪೊಲೀಸರು ಉದಯ್ ಮತ್ತು ಅರವಿಂದ್​ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೊಲೆ ಯತ್ನದ ವಿಷಯ ಬೆಳಕಿಗೆ ಬಂದಿದೆ.

RELATED TOPICS:
English summary :The accused were arrested after 6 months of plotting to kill pregnant wives by accident

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...