ರಾಡ್ನಿಂದ ಹೊಡೆದು ತಂದೆ-ತಾಯಿಯನ್ನ ಕೊಂದು ಮಗ ಎಸ್ಕೇಪ್! | JANATA NEWS
ಬೆಂಗಳೂರು : ರಾಜಧಾನಿಯಲ್ಲಿ ಮಗನೇ ತಂದೆ-ತಾಯಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ತಾಯಿ ಶಾಂತ (60), ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಇವರನ್ನು ಮಗ ಶರತ್ (26) ಕೊಲೆ ಮಾಡಿದ್ದಾನೆ. ಕೊಲೆಯಾದ ದಂಪತಿ ಮಂಗಳೂರು ನಿವಾಸಿಗಳಾಗಿದ್ದು, ಕಳೆದ 12 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಶಾಂತಾ ನಿವೃತ್ತ ಕೇಂದ್ರ ಸರ್ಕಾರಿ ನೌಕರರು. ಭಾಸ್ಕರ್ ಕ್ಯಾಂಟೀನ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡಿಕೊಂಡಿದ್ದರು. ಭಾಸ್ಕರ್-ಶೀಲಾ ದಂಪತಿಗೆ ಇಬ್ಬರು ಮಕ್ಕಳು. ಇಬ್ಬರಲ್ಲಿ ಹಿರಿಯ ಮಗ ಕೆಲಸಕ್ಕೆ ಹೋಗುತ್ತಿದ್ರೆ, ಶಶಾಂಕ್ ಮನೆಯಲ್ಲಿಯೇ ಇರುತ್ತಿದ್ದನು.
ಆಗಾಗ ಸೈಕೋ ರೀತಿ ವರ್ತಿಸ್ತಿದ್ದ ಶರತ್, ಸೋಮವಾರ ಸಂಜೆ ವೇಳೆಗೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಈ ವೇಳೆ ರಾಡ್ ನಿಂದ ತಂದೆ-ತಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂತರ ಮನೆಯ ಬಾಗಿಲು ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ.
ಇಂದು ಬೆಳಗ್ಗೆ ಹಿರಿಯ ಮಗ ತಂದೆ-ತಾಯಿಗೆ ಕರೆ ಮಾಡಿದ್ದಾನೆ. ಯಾರೂ ಫೋನ್ ರಿಸೀವ್ ಮಾಡದಿದ್ದಾಗ ಪಕ್ಕದ್ಮನೆಯವರಿಗೆ ಕರೆ ಮಾಡಿ ಪೋಷಕರ ಬಗ್ಗೆ ವಿಚಾರಿಸಿದ್ದಾನೆ.
ಪಕ್ಕದ್ಮನೆ ಜನರು ಬಂದು ನೋಡಿದಾಗ ಜೋಡಿ ಕೊಲೆ ನಡೆದಿರೋದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ.