Wed,May08,2024
ಕನ್ನಡ / English

ಮೈತ್ರಿಕೂಟಕ್ಕೆ ಇಂಡಿಯಾ ಎಂಬ ಹೆಸರು ಫೈನಲ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ | JANATA NEWS

18 Jul 2023
1370

ಬೆಂಗಳೂರು : ಮೈತ್ರಿಕೂಟಕ್ಕೆ ಇಂಡಿಯಾ ಎಂಬ ಹೆಸರು ಫೈನಲ್ ಆಗಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಭಾಗಿಯಾದ ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಎಲ್ಲ 26 ಪಕ್ಷದ ನಾಯಕರ ಸಭೆ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ 26 ಪಕ್ಷದ ಹಿರಿಯ ನಾಯಕರು ಭಾಗಿಯಾಗಿದ್ದು, ಬಹಳ ಮಹತ್ವದ ಸಭೆ ಮಾಡಿದ್ದೇವೆ. ಪ್ರಜಾಪ್ರಭುತ್ವ ಉಳಿವಿಗಾಗಿ ಸಭೆ ಮಾಡಿದ್ದೇವೆ. ಒಟ್ಟಾಗಿ ಸೇರಿ ಒಂದೇ ಧ್ವನಿ ಎತ್ತಲಿದ್ದೇವೆ ಎಂದಿದ್ದಾರೆ.

ಜನರ ಪರವಾದ ನಿರ್ಣಯಗಳನ್ನ ತೆಗೆದುಕೊಂಡಿದ್ದೇವೆ ಎಲ್ಲರು ಒಪ್ಪುವಂತಹ ಹೆಸರನ್ನ ಹುಡುಕಿದ್ದೇವೆ INDIA ಹೆಸರನ್ನ ಒಕ್ಕೂಟಕ್ಕೆ ಇಡಲಾಗಿದೆ. ಈ ಹೆಸರಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.

ನರೇಂದ್ರ ಮೋದಿ ಅವರು ನಮ್ಮ ಸಭೆ ನೋಡಿದ ಬಳಿಕ ಎನ್ಡಿಎ ಮೀಟಿಂಗ್ ಕರೆದಿದ್ದಾರೆ.. ಮೊದಲು ಎನ್ಡಿಎ‌ ಬಗ್ಗೆ ಅವರಿಗೇ ನೆನಪಿರಲಿಲ್ಲ ಅಂತ ವ್ಯಂಗ್ಯವಾಡಿದರು. NDAನಲ್ಲಿರುವ ಪಕ್ಷಗಳು ಮೋದಿ ಮುಂದೆ ತುಟಿ ಬಿಚ್ಚಿ ಮಾತನಾಡುವಾಗಿರಲಿಲ್ಲ. ಈಗ NDA ತುಕಡೇ ತುಕಡೇ ಆಗಿದ್ದರು.. ಈಗ ಅವರು ಅವೆಲ್ಲವನ್ನೂ ಜೋಡಿಸುವ ಕೆಲಸ ಮಾಡ್ತಿದ್ದಾರೆ.. ಅಂದರೆ ಮೋದಿ ನಮ್ಮಿಂದ‌ ಒಗ್ಗಟ್ಟಿನಿಂದ ಹೆದರಿಕೊಂಡಿದ್ದಾರೆ ಅಂತ ವ್ಯಂಗ್ಯವಾಡಿದರು.

ಮುಂದಿನ ಸಭೆಯನ್ನು ಮುಂಬೈನಲ್ಲಿ ನಡೆಸಲಾಗುತ್ತದೆ. ಬಿಜೆಪಿಯು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸರ್ಕಾರದ ಸಂಸ್ಥೆಗಳಾದ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷವನ್ನು ಹೆಣೆಯುತ್ತಿದೆ. ನಮಗೆ ದೇಶ ಮುಖ್ಯ. ರಾಜಕೀಯವಾಗಿ ನಮಗೆ ರಾಜ್ಯವಾರು ವಿಭಿನ್ನತೆ ಬೇರೆ ಇರಬಹುದು‌. ಆದರೆ ದೇಶದ ಉದ್ದೇಶಕ್ಕೆ ಎಲ್ಲರೂ ಒಗ್ಗಟ್ಟಾಗಿ ಹೋಗಲು ನಿರ್ಣಯಿಸಲಾಗಿದೆ. ಪಾಟ್ನಾ ಸಭೆಯಲ್ಲಿ 16 ಪಕ್ಷಗಳು ಇದ್ದವು, ಈ ಸಭೆಗೆ 26 ಪಕ್ಷಗಳು ಬಂದಿವೆ‌ ಎಂದರು.

2024ರ ಚನಾವಣೆಯಲ್ಲಿ ಮೋದಿ ಸೋಲಿಸಲು ಎಲ್ಲಾ ಪಕ್ಷಗಳ ಒಗ್ಗಟ್ಟಿನ ಮಂತ್ರ, ಸಿದ್ಧಾಂತ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ.

ನಮ್ಮ ಮೈತ್ರಿಕೂಟಕ್ಕೆ ಒಂದು ಹೆಸರು ಇಟ್ಟಿದ್ದೇವೆ. ಹಿಂದೆ ಯುಪಿಎ ಅಂತ ಹೆಸರು ಇತ್ತು. ಈಗ india ಅಂತ ನಾಮಕರಣ ಮಾಡಿದ್ದೇವೆ. ಹಲವು ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ 11 ಮಂದಿ ಸದಸ್ಯರ ಸಂಯೋಜಕರ ಸಮಿತಿ ರಚನೆಯಾಗಿದೆ ಶೀಘ್ರದಲ್ಲೇ ಸದಸ್ಯರನ್ನ ಹೆಸರಿಸಲಾಗುವುದು ಸದ್ಯದಲ್ಲೇ ಮುಂಬೈನಲ್ಲಿ ಸಭೆಯನ್ನ ನಡೆಸಲಾಗುತ್ತದೆ ಪ್ರಚಾರಕ್ಕಾಗಿ ಕಮಿಟಿಯನ್ನ ರಚಿಸಲಾಗುತ್ತದೆ ದೆಹಲಿಯಲ್ಲೇ ಈ ಕಮಿಟಿ ಕಾರ್ಯನಿರ್ವಹಿಸಲಿದೆ ಅಂತ ಖರ್ಗೆ ಹೇಳಿದ್ದಾರೆ.

ಇಂಡಿಯಾ ಅಂದರೆ ಇಂಡಿಯನ್ ನ್ಯಾಶನಲ್ ಡೆಮಾಕ್ರಟಿಕ್ ಇನ್‌ಕ್ಲೂಸೀವ್ ಅಲಯನ್ಸ್ ಒಕ್ಕೂಟ.
I: Indian
N: National
D: Democractic
I: Inclusive
A: Alliance

RELATED TOPICS:
English summary :The name India is final for the alliance: Mallikarjuna Kharge

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...