ಜೈನಮುನಿ ಹತ್ಯೆ ಪ್ರಕರಣ, ಸಿಐಡಿಗೆ ವರ್ಗಾವಣೆ | JANATA NEWS
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಜೈನಮುನಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸದನದಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಜಿಲ್ಲೆಯ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸದನಕ್ಕೆ ತಿಳಿಸಿದ್ದಾರೆ. ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸೂಕ್ಷ್ಮವಾಗಿರುವುದರಿಂದ, ಸಾರ್ವಜನಿಕರ ಕೋರಿಕೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಲಾಗುವುದು ಸಿದ್ಧರಾಮಯ್ಯ ಸದನಕ್ಕೆ ತಿಳಿಸಿದ್ದಾರೆ
ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರುವುದರಿಂದ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು. ಬಿಜೆಪಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಹೋರಾಟ ಮಾಡಿತ್ತು. ಆದರೆ, ರಾಜ್ಯ ಪೊಲೀಸರು ತನಿಖೆಗೆ ಸರ್ಮಥರಿದ್ದಾರೆ. ಅವರಿಂದಗೇಲ ತನಿಖೆ ಮಾಡಿಸುವುದಾಗಿ ಸರ್ಕಾರ ತಿಳಿಸಿತ್ತು.