ಪ್ರಧಾನಿ ಮೋದಿ ಭೇಟಿಯಾದ ತೇಜಸ್ವಿನಿ ಅನಂತ್ ಕುಮಾರ್, ಕುತೂಹಲ ಕೆರಳಿಸಿದ ಭೇಟಿ! | JANATA NEWS
ಬೆಂಗಳೂರು : ತೇಜಸ್ವಿನಿ ಅನಂತಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೆಲ ದಿನಗಳಿಂದ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದಾರಾ? ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಹಾರುತ್ತಾರಾ ಎನ್ನವ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದವು. ಈ ಸಂಬಂಧ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಹೇಳಿದ್ದರು.
2019ರ ಚುನಾವಣೆಯಲ್ಲಿ ಅನಂತಕುಮಾರ್ ಅವರ ಸ್ಥಾನದಲ್ಲಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅಚ್ಚರಿಯ ರೀತಿಯಲ್ಲಿ ತೇಜಸ್ವಿ ಸೂರ್ಯ ಟಿಕೆಟ್ ಪಡೆದುಕೊಂಡಿದ್ದರು.
ಪ್ರಧಾನಿ ಮೋದಿ ಭೇಟಿಯಾದ ತೇಜಸ್ವಿನಿ ಅನಂತಕುಮಾರ್ ಏನು ಮಾತುಕತೆ ನಡೆಸಿದ್ದಾರೆ ಎನ್ನುವುದು ಮಹತ್ವ ಪಡೆದುಕೊಂಡಿದೆ.