ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಇಲ್ಲಿಯವರೆಗೆ 6.14 ಕೋಟಿ ರೂ. ಬಿಡುಗಡೆ | JANATA NEWS
ಬೆಂಗಳೂರು : ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ.5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ರೂ. 6.14 ಕೋಟಿ ಹಣ ನೀಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜಿಲ್ಲಾವಾರು ಎಷ್ಟು ತಾಲ್ಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನು ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಆ ಮೂಲಕ, ರಾಜ್ಯದಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ.
ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟು 101 ತಾಲ್ಲೂಕುಗಳ 366 ಗ್ರಾಮ ಪಂಚಾಯತಿಗಳ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ನೀಡಲಾಗಿದ್ದು, ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯಲು ₹93 ಲಕ್ಷ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.