ಕುಡಿದ ಮತ್ತಿನಲ್ಲಿ ಆಯಸಿಡ್ ಕುಡಿದ ವ್ಯಕ್ತಿ! | JANATA NEWS
ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಸಿದ್ದರಾಜು (40) ಎಂಬಾತ ಮೃತದುರ್ದೈವಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.
ತೀವ್ರವಾದ ನೋವಿನಿಂದ ನರಳುತ್ತಿದ್ದ ಆತನ ಕಿರುಚಾಟವನ್ನು ಕೇಳಿ ಮನೆಯವರು ಹಾಗೂ ಗ್ರಾಮಸ್ಥರು ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.