ಡೆತ್ ನೋಟ್ನಲ್ಲಿ ಪ್ರಿಯಕರನ ಹೆಸರು ಬರೆದಿಟ್ಟು ಆತ್ಮಹತ್ಯೆ! | JANATA NEWS
ಬೆಂಗಳೂರು : ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.
ಪ್ರೀತಿ ನಿರಾಕರಣೆ ಹಿನ್ನೆಲೆ ಯುವತಿ ವಿದ್ಯಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಮನೆಯಲ್ಲಿ ವಿದ್ಯಾಶ್ರೀ ಪೋಷಕರಿಗೆ ಡೆತ್ನೋಟ್ ಲಭ್ಯವಾಗಿದೆ. ಡೆತ್ನೋಟ್ ಸಿಕ್ಕ ಹಿನ್ನೆಲೆ ಪೋಷಕರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್ನೋಟ್ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾಶ್ರೀಗೆ ಸೋಶಿಯಲ್ ಮೀಡಿಯಾದಲ್ಲಿ ಅಕ್ಷಯ್ ಎಂಬಾತನ ಪರಿಚಯವಾಗಿತ್ತು. ಮಂಡ್ಯ ಮೂಲದ ಅಕ್ಷಯ್ ಬಸವೇಶ್ವರ ನಗರದಲ್ಲಿ ವಾಸವಿದ್ದನು. ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು.
ಹಲವು ಬಾರಿ ವಿದ್ಯಾಶ್ರೀಯಿಂದ ಹಣಕಾಸಿನ ಸಹಾಯವನ್ನು ಸಹ ಅಕ್ಷಯ್ ಪಡೆದುಕೊಂಡಿದ್ದನು. ಅಕ್ಷಯ್ ವಿದ್ಯಾ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾಶ್ರೀ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ ಎನ್ನಲಾಗಿದೆ.
ತನ್ನನ್ನು ಮದುವೆ ಆಗುವಂತೆ ಅಕ್ಷಯ್ ಮೇಲೆ ವಿದ್ಯಾಶ್ರೀ ಒತ್ತಡ ಹಾಕಿದ್ದಳು. ಆದ್ರೆ ಅಕ್ಷಯ್ ಮದುವೆಯಾಗಲು ಎರಡು ವರ್ಷ ಸಮಯಾವಕಾಶ ಕೇಳಿದ್ದ ಎನ್ನಲಾಗಿದೆ. ಮೂರು ತಿಂಗಳ ಹಿಂದಿನಿಂದ ಅಕ್ಷಯ್ ಫೋನ್ ಕಾಲ್ ಗೂ ಸಿಗದೆ ನಾಟ್ ರೀಚಬಲ್ ಆಗಿದ್ದ.
ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನನ್ನ ಸಾವಿಗೆ ಅಕ್ಷಯ್ ಕಾರಣ ಅವನು ನನ್ನ ನಾಯಿ ಥರ ಟ್ರೀಟ್ ಮಾಡ್ತಾ ಇದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದಾರೆ ನನಗೆ ನನ್ನ ಪ್ಯಾಮಿಲಿಗೆ ಕೆಟ್ಟ ಕೆಟ್ಟ ಮಾತಲ್ಲಿ ಬೈದು ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ನನ್ನ ಡಿಪ್ರೆಷನ್ಗೆ ಅಡಿಕ್ಟ್ ಮಾಡಿದ್ದಾನೆ.
ಹೀಗಾಗಿ ನನಗೆ ಬದುಕಲು ಆಗುತ್ತಿಲ್ಲ. ಡೇ ಬೈ ಡೇ ನನಗೆ ತುಂಬಾ ಸ್ಟ್ರೈನ್ ಆಗುತ್ತಿದೆ. ಅಮ್ಮ ಗುರು ಮನು I am Sorry ದಯವಿಟ್ಟು ನನ್ನ ಕ್ಷಮಿಸಿ. ಎಲ್ಲಾ ಹುಡುಗಿಯಲ್ಲಿ ವಿನಂತಿ ದಯವಿಟ್ಟು ಯಾರು ಲವ್ ಮಾಡಬೇಡಿ. Good bye this World ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ದೂರಿನ ಹಿನ್ನೆಲೇ ಅಕ್ಷಯ್ನನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.