ಗಾಂಜಾ ಚಾಕೊಲೇಟ್ ದಂಧೆ ಪ್ರಕರಣ: ಎಂಟು ಕಡೆ ದಾಳಿ, ಐವರ ಬಂಧನ | JANATA NEWS
ರಾಯಚೂರು : ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ರಾಯಚೂರು ನಗರ, ಯರಮರಸ್, ಚಿಕ್ಕಸುಗೂರು, ಇಂಡಸ್ಟ್ರಿಯಲ್ ಏರಿಯಾ ಸೇರಿ ಎಂಟು ಕಡೆ ದಾಳಿ ನಡೆಸಿ, ನಾಲ್ಕು ಕಡೆಗಳಲ್ಲಿ ಇಬ್ಬರು ಕಿಂಗ್ ಫಿನ್ಗಳು ಸೇರಿ ಐದು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಿಹಾರ್ ಮೂಲದ ಸಂದೀಪ್ ಪಾಂಡೆ ಹಾಗೂ ರಾಯಚೂರು ನಗರದ ವಾಜಿದ್ ಬಂಧಿತ ಕಿಂಗ್ ಫಿನ್ಗಳಾದರೆ, ಅದನ್ನು ಡಿಸ್ಟ್ರಿಬ್ಯೂಟ್ ಮಾಡುತ್ತಿದ್ದ ರತನೇಶ್ ಮತ್ತು ಮಗ ಕುಂದನ್ಕುಮಾರ್ ಹಾಗೂ ಕೃಷ್ಣಾ ರೆಡ್ಡಿಯನ್ನ ಬಂಧಿಸಲಾಗಿದೆ.
ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್ಗಳನ್ನ ಜಪ್ತಿ ಮಾಡಲಾಗಿದೆ. ಕಿರಾಣಿ ಅಂಗಡಿಗಳು, ಹೋಟೆಲ್ಗಳು ಹಾಗೂ ಪಾನ್ ಶಾಪ್ಗಳಲ್ಲಿ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಸದರ್ ಬಜಾರ್ ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.