ಕಲುಷಿತ ನೀರು ಸೇವನೆಯಿಂದ ಮೂವರ ಸಾವು | JANATA NEWS
ಚಿತ್ರದುರ್ಗ : ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ವಿಷಕಾರಿ ನೀರು ಸೇವನೆಯಿಂದ ಸಾವುಗಳು ಸಂಭವಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜನರ ಬಳಿ ತಹಶೀಲ್ದಾರ್ ನಾಗವೇಣಿ ನೇತೃತ್ವದ ತಂಡಕ್ಕೆ ತೆರಳಿ ವಿಚಾರಿಸಿದಾಗ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆ ನಡೆದು ಇಷ್ಟು ದಿನವಾದ್ರೂ ಈವರೆಗೂ ಸೂಕ್ತ ಅನ್ನ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿಲ್ಲವೆಂದು ಕಿಡಿಕಾರಿದ್ದಾರೆ. ಈ ವೇಳೆ ತಹಸೀಲ್ದಾರ್ ನಾಗವೇಣಿ ಜತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ಉದ್ಯೋಗಿಯಾಗಿರುವ ಪಂಪ್ ಆಪರೇಟರ್ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನು ಜಿಲ್ಲಾಧಿಕಾರಿ ಜಿಆರ್ ಜೆ ದಿವ್ಯಪ್ರಭು ಅಮಾನತು ಮಾಡಿದ್ದಾರೆ.
ಘಟನೆ ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಗೆ ಆದೇಶಿಸಿದ್ದು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಈ ತಂಡ ಸ್ಥಳ ಪರಿಶೀಲನೆ ಮಾಡಿ ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.
ಅಸ್ವಸ್ಥರ ಆರೋಗ್ಯ ವಿಚಾರಿಸಿದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ.