ಕುಮಾರಸ್ವಾಮಿ ಕನಸು ನುಚ್ಚುನೂರಾಗಿ ಭಗ್ನಪ್ರೇಮಿಯಂತೆ ಆಗಿದ್ದಾರೆ: ದಿನೇಶ್ ಗುಂಡೂರಾವ್ | JANATA NEWS
ಬೆಂಗಳೂರು : ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕನಸು ನುಚ್ಚು ನೂರಾಗಿ ಭಗ್ರಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.
ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್ಡಿಕೆ ವಿರುದ್ಧ ಟ್ವೀಟ್ ಮೂಲಕ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೆಚ್ಡಿಕೆ ಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಹೆಚ್ಡಿಕೆ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್ ಡಿ ಕುಮಾರಸ್ವಾಮಿ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲವಿಲ ಒದ್ದಾಡುತ್ತಿರುವ ಕುಮಾರಸ್ವಾಮಿ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ ಎಂದು ಪ್ರಶ್ನಿಸಿದ್ದಾರೆ.
ಎಚ್ ಡಿಕೆಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದಿದ್ದಾರೆ.
1
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 6, 2023
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ.
ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ.
ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?